ತುರುವೇಕೆರೆ: ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಮತದಾನವು ಶೇಕಡಾ ೮೦ ರಷ್ಟು ಆಗಿದೆ. ಎಲ್ಲಾ ಕಡೆಯೂ ಶಾಂತಿಯುತವಾಗಿ ಮತದಾನ ನಡೆದಿದೆ.
ಶಾಸಕ ಎಂ.ಟಿ.ಕೃಷ್ಣಪ್ಪ ಅಂಚಿಹಳ್ಳಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದರು. ಮಾಜಿ ಶಾಸಕ ಮಸಾಲ ಜಯರಾಮ್ ಅಂಕಳಕೊಪ್ಪ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮಾಜಿ ಶಾಸಕ ಎಸ್.ರುದ್ರಪ್ಪ ಶ್ರೀರಾಂಪುರ ಮತಗಟ್ಟೆಯಲ್ಲಿ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಮುನಿಯೂರು ಮತಗಟ್ಟೆಯಲ್ಲಿ, ಮಾಜಿ ಶಾಸಕ ಎಚ್.ಬಿ.ನಂಜೇಗೌಡ ಹೊಡಿಕೆಘಟ್ಟ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಕೈಕೊಟ್ಟ ಮತ ಯಂತ್ರ: ತಾಲೂಕಿನ ತಾಳಕೆರೆ ಗ್ರಾಪಂ ವ್ಯಾಪ್ತಿಯ ಚಂಡೂರು ಮತಗಟ್ಟೆ ಹಾಗೂ ಮಾಯಸಂದ್ರ ಹೋಬಳಿಯ ಕಣಕೂರು ಮತಗಟ್ಟೆಯಲ್ಲಿ ಪಟ್ಟಣದ ಎರಡು ಮತಗಟ್ಟೆಗಳಲ್ಲಿ ಮತಯಂತ್ರ ಕೆಟ್ಟು ಹೋಗಿ ಕೆಲ ಕಾಲ ಮತದಾನ ಸ್ಥಗಿತಗೊಂಡಿತ್ತು. ಅಧಿಕಾರಿಗಳು ಕೂಡಲೇ ತೆರಳಿ ಸರಿಪಡಿಸಿ ಮತದಾನಕ್ಕೆ ಅನುವು ಮಾಡಿಕೊಟ್ಟರು.