ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾನುವಾರ ಬೀಳಗಿ ವಿಧಾನಸಭಾ ಕ್ಷೇತ್ರದ ಫಕೀರಬೂದಿಹಾಳ, ಕೈನಕಟ್ಟಿ ಸೇರಿದಂತೆ ಹಲವೆಡೆ ಮತಯಾಚನೆ ಮಾಡಿ ಮಾತನಾಡಿದ ಅವರು, ದಣಿವರಿಯದೆ ನಿಮ್ಮ ಕೆಲಸ ಮಾಡುತ್ತೇನೆ. ನನಗೊಂದು ಅವಕಾಶ ಕೊಡಿ ಎಂದು ವಿನಂತಿಸಿದರು. ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ರೈತರ ಬದುಕು ಹಸನಾಗಿಲ್ಲ. ಆದಾಯ ಇದ್ದಷ್ಟೇ ಇದೆ. ಆದರೆ, ವೆಚ್ಚ ಹೆಚ್ಚಾಗುತ್ತಿದೆ. ಕೃಷಿ ಉಪಕರಣಗಳು, ರಸಗೊಬ್ಬರ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡಬೇಕು ಎಂಬ ಬೇಡಿಕೆ ಇದುವರೆಗೆ ಈಡೇರಿಲ್ಲ. ಬೆಂಬಲ ಬೆಲೆ ನಿಗದಿ ಬೇಡಿಕೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅನ್ನದಾತನ ಬದುಕು ಅತಂತ್ರವಾಗಿದೆ. ದೇಶದ ಬೆನ್ನೆಲುಬು ಎಂದು ಕರೆಯಲ್ಪಡುವ ರೈತ ನೆಮ್ಮದಿಯ ಬದುಕು ಸಾಗಿಸುವ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದರು.
ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಹುನ್ನಾರ ಬಿಜೆಪಿಯಿಂದ ನಡೆದಿದೆ. ಮತದಾರರು ಇದಕ್ಕೆ ಅವಕಾಶ ಕೊಡಬಾರದು. ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ತಂದರೆ ಮತ್ತಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ₹25 ಲಕ್ಷ ಆರೋಗ್ಯ ವಿಮೆ ಯೋಜನೆ, ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ ₹1 ಲಕ್ಷ ಜಮಾ ಸೇರಿದಂತೆ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಂತೆ ಕೇಂದ್ರವೂ ಕೂಡ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿದೆ ಎಂದರು.
ಕೋಟ್..
ಕರ್ನಾಟಕ ರಾಜ್ಯ ಸತತ ಎರಡು ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಅಂಥ ರೈತರಿಗೆ ನೆರವಾಗಲು ₹18 ಸಾವಿರ ಕೋಟಿ ನೆರವು ನೀಡಿ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಮನವಿ ಮಾಡಿದರು. ಆದರೆ, ಅವರು ರಾಜ್ಯಕ್ಕೆ ಕೊಟ್ಟಿದ್ದು ಚೊಂಬು. ಕೇಂದ್ರ ಸರ್ಕಾರ ನಮಗೆ ಭಿಕ್ಷೆ ಕೊಡಬೇಕಾಗಿಲ್ಲ. ರಾಜ್ಯದ ಪಾಲಿಗೆ ಬರಬೇಕಾಗಿದ್ದ ಅನುದಾನವನ್ನು ಕೇಳಿದರೆ ಸ್ಪಂದಿಸಲಿಲ್ಲ.ಸಂಯುಕ್ತಾ ಪಾಟೀಲ. ಕಾಂಗ್ರೆಸ್ ಅಭ್ಯರ್ಥಿ