ಕನ್ನಡಪ್ರಭ ವಾರ್ತೆ ಮಡಿಕೇರಿ
ತಂಡವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿದರು.
ತಂಡದಲ್ಲಿ ದೀಪ್ ಮಾಲಾ (ಅಧೀನ ಕಾರ್ಯದರ್ಶಿ), ಸಹಾಯಕ ವಿಭಾಗಾಧಿಕಾರಿಗಳಾದ ಜ್ಯೋತ್ಸಾನಾ ಮಿಗ್ಲಾನಿ, ಶುಭಮ್ ಮಿಶ್ರಾ (ಎಸ್ಒ) ಪ್ರಿನ್ಸ್ ರೈ (ಪಿಎಸ್), ಜಾವೇದ್ ಖಾನ್ (ಎಎಸ್ಒ), ಅಂಕುರ್ ಮಲಿಕ್(ಎಎಸ್ಒ), ಪ್ರದೀಪ್ ಕೌರ್ (ಎಸ್ಎಸ್ಒ), ಆಯುಷಿ ನಾಯಕ್(ಎಎಸ್ಒ) ಮತ್ತು ಮೊಹಮ್ಮದ್ ಅರ್ಷದ್(ಜೆಎಸ್ಎ) ಎಂಬ 9 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ. ಅವರು ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು."ಭಾರತದ ವಿಶಿಷ್ಟ/ ದೂರಸ್ಥ ಮತಗಟ್ಟೆಗಳಿಗೆ ಭೇಟಿ ನೀಡುವುದು " ಎಂಬ ಈ ಉಪಕ್ರಮವು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರೊಂದಿಗೆ ಸವಾಲಿನ ಭೌಗೋಳಿಕ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವ ಭಾಗವಹಿಸುವಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.
ಕಾರುಗುಂದ ಮತ್ತು ಕುಂದಚೇರಿ ಹಾಗೂ ಕೋಪಟ್ಟಿ ಮತಗಟ್ಟೆಗಳಿಗೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಇದ್ದರು.