ಚುನಾವಣಾ ಅಕ್ರಮ: 59.12ಲಕ್ಷ ರು. ಮೌಲ್ಯದ ಮದ್ಯ ಜಪ್ತಿ

KannadaprabhaNewsNetwork |  
Published : Mar 26, 2024, 01:05 AM IST
ಚುನಾವಣಾ ಅಕ್ರಮ: 59.12ಲಕ್ಷ ರು. ಮೌಲ್ಯದ ಮದ್ಯ ಜಪ್ತಿ | Kannada Prabha

ಸಾರಾಂಶ

ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16ರಿಂದ 25 ರವರೆಗೆ 7763.99 ಲೀಟರ್ ಭಾರತೀಯ ತಯಾರಿಕಾ ಮದ್ಯ, 17648.5 ಲೀ. ಬಿಯರ್ ಹಾಗೂ 6 ಲೀ. ಸೇಂದಿ ಸೇರಿ 59,12,2490 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16ರಿಂದ 25 ರವರೆಗೆ 7763.99 ಲೀಟರ್ ಭಾರತೀಯ ತಯಾರಿಕಾ ಮದ್ಯ, 17648.5 ಲೀ. ಬಿಯರ್ ಹಾಗೂ 6 ಲೀ. ಸೇಂದಿ ಸೇರಿ 59,12,2490 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮ ತಡೆಯಲು 58 ವಿಚಕ್ಷಣ ದಳ(ಎಫ್‌ಎಸ್‌ಟಿ-ಫ್ಲೈಯಿಂಗ್ ಸ್ಕ್ವಾಡ್), 44 ಸ್ಥಿರ ಕಣ್ಗಾವಲು ತಂಡ (ಎಸ್‌ಎಸ್‌ಟಿ-ಸ್ಟಾö್ಯಟಿಕ್ ಸರ್ವೇಲೆನ್ಸ್ ತಂಡ) ಹಾಗೂ 11 ಅಬಕಾರಿ ತಂಡವನ್ನು ರಚಿಸಿ ನಿಯೋಜಿಸಲಾಗಿದೆ.

ಜಿಲ್ಲಾದ್ಯಂತ ನಿಯೋಜಿತ ತಂಡಗಳು ಮಾರ್ಚ್ 16 ರಿಂದ 25 ರವರೆಗೆ ಪೊಲೀಸ್ ಅಧಿಕಾರಿ/ಸಿಬ್ಬಂದಿ ಸಹಕಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಎಫ್‌ಎಸ್‌ಟಿ ತಂಡದಿಂದ 10,91,500 ರು. ಹಾಗೂ ಎಸ್‌ಎಸ್‌ಟಿ ತಂಡದಿಂದ 15,05,950 ರು. ಸೇರಿ 25.97ಲಕ್ಷ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ದಾಖಲೆಯಿಲ್ಲದ 10,00,500 ರು. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ 15,96,950 ರು. ಹಣವನ್ನು ಜಿಲ್ಲಾ ಖಜಾನೆಗೆ ಜಮೆ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಜಮೆಯಾಗಿರುವ 10,00,500 ರು. ಹಣಕ್ಕೆ ಸಮರ್ಪಕ ದಾಖಲೆ ಒದಗಿಸಿದ ನಂತರ ಸಂಬಂಧಿಸಿದವರಿಗೆ ಹಿಂದಿರುಗಿಸಲಾಗುವುದು.

ಅದೇ ರೀತಿ ಮಾರ್ಚ್ 16 ರಿಂದ 25ರವರೆಗೆ 1.70ಲಕ್ಷ ರೂ. ಮೌಲ್ಯದ 5.35 ಕೆ.ಜಿ. ಗಾಂಜಾ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿಟ್ಟಿದ್ದ 3,50,640 ರು. ಮೌಲ್ಯದ 73 ಬಾಕ್ಸ್ ಕುಕ್ಕರ್, 700 ಗೋಡೆ ಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದಾಖಲಾದ ಪ್ರಕರಣಗಳಲ್ಲಿ ಅಬಕಾರಿ ಕಾಯ್ದೆಯನ್ನು ಉಲ್ಲಂಘಿಸಿದ ಒಟ್ಟು 231 ಪ್ರಕರಣಗಳಿಗೆ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ಮಾಡಲಾಗಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ