ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವಿಸುವುದು, ಸಂಬಂಧಗಳ ಮಧ್ಯೆ ವಿಶ್ವಾಸ ಹೊಂದುವುದು ಇದೆ. ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಆಧಾರದಲ್ಲಿ ಮತ ಕೇಳುತ್ತೇವೆಂದು ಎದುರಾಳಿ ಅಭ್ಯರ್ಥಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ಕ್ಷೇತ್ರದ ಪ್ರಜ್ಞಾವಂತ ಮತದಾರರು ಅಭಿವೃದ್ಧಿಯ ಅಲೆ ನೋಡಿಯೇ ತಮ್ಮನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ವಿಶ್ವಾಸವಿದೆ. ಹತ್ತು ವರ್ಷಗಳಿಂದ ನರೇಂದ್ರ ಮೋದಿ ಅಲೆಯನ್ನು ಜನ ನೋಡುತ್ತಿದ್ದಾರೆ. ಈ ಸಲ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು, ಅತ್ಯಧಿಕ ಮತಗಳನ್ನು ನೀಡಿ, ತಮ್ಮನ್ನು ಗೆಲ್ಲಿಸುವಂತೆ ಜನತೆಗೆ ಮನವಿ ಮಾಡಿದರು.ಎಸ್.ಎಸ್. ಕೇರ್ ಟ್ರಸ್ಟ್ನಿಂದ ಕೈಗೊಂಡ ಆರೋಗ್ಯ ಶಿಬಿರಗಳನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವ ಮೂಲಕ ಜನರಿಗೆ ತಲುಪುವ ಕೆಲಸ ಮಾಡಲಾಗುವುದು. ದಾವಣಗೆರೆ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ, ನೀರಿನ ಸಮಸ್ಯೆ ನಿವಾರಿಸುವ, ಭದ್ರಾ ನಾಲೆಯ ನೀರು ಕೊನೆಯ ಭಾಗಕ್ಕೆ ತಲುಪಿಸುವ, ಅನುದಾನಕ್ಕೆ ಅನುಗುಣವಾಗಿ ಯೋಜನಾಬದ್ಧವಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದೂ ಒಳಗೊಂಡಂತೆ ಕ್ಷೇತ್ರದ ಬಗ್ಗೆ ಅನೇಕ ಕನಸು, ಚಿಂತನೆ, ಆಲೋಚನೆ ಹೊಂದಿದ್ದೇನೆ ಎಂದು ತಿಳಿಸಿದರು.
ಭಿನ್ನಮತವಿದ್ರೆ ಎಸ್ಎಸ್, ಎಸ್ಎಸ್ಎಂ ಕರೆಸಿ ಮಾತಾಡ್ತಾರೆ: ಡಾ.ಪ್ರಭಾ ಹೇಳಿಕೆ ದಾವಣಗೆರೆ: ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ನ ಎಲ್ಲ ಶಾಸಕರು ತಮಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಭಿನ್ನಮತವಿದ್ದರೆ ಅಂತಹವರನ್ನು ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ ಅವರು ಕರೆಸಿ, ಮಾತನಾಡುತ್ತಾರೆ. ಎಲ್ಲವನ್ನೂ ಬಗೆಹರಿಸುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
- - - ಕೋಟ್ ಬಿಜೆಪಿ ಭಿನ್ನಮತ ಒಳಗೊಂಡತೆ ಎದುರಾಳಿ ಪಕ್ಷದ ಯಾವುದೇ ವಿಚಾರಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನರಿಗೆ ಕೆಲಸ ತಲುಪಿಸುವ, ಮೂಲಭೂತ ಸೌಕರ್ಯ ಒದಗಿಸುವ ಸಿಂಗಲ್ ಪಾಯಿಂಟ್ನೊಂದಿಗೆ ಮತ ಕೇಳುತ್ತೇವೆ. ಕೆಲಸ, ಸೇವೆ ಮಾಡುವವರಿಗೆ ಜನರು ಮತ ನೀಡುವರು ಎಂಬ ವಿಶ್ವಾಸವಿದೆ
- - - -(ಫೋಟೋ ಇದೆ):