ಚುನಾವಣಾ ಅಕ್ರಮ: ಸಿ-ವಿಜಿಲ್‌ನಲ್ಲಿ ದೂರು, 100 ನಿಮಿಷಗಳಲ್ಲಿ ಕ್ರಮ

KannadaprabhaNewsNetwork |  
Published : Mar 31, 2024, 02:03 AM IST
ಸಿವಿಜಿಲ್30 | Kannada Prabha

ಸಾರಾಂಶ

ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.

ಕನ್ನಡಪ್ರಭ ವಾರ್ತೆ ಮಣಿಪಾಲ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಯುವಲ್ಲಿ ಸಾರ್ವಜನಿಕರ ಪಾತ್ರ ಬಹುಮುಖ್ಯವಾಗಿದೆ. ಅದಕ್ಕಾಗಿ ಚುನಾವಣಾ ಅಕ್ರಮಗಳನ್ನು ತಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳ ಜೊತೆಗೆ ಚುನಾವಣಾ ಆಯೋಗವು ಸಿ-ವಿಜಿಲ್ (ಸಿಟಿಜನ್- ವಿಜಿಲಿಯನ್ಸ್ )ಎಂಬ ಆ್ಯಪ್ ಅನ್ನು ರೂಪಿಸಿದೆ.

ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.

ಸಿ-ವಿಜಿಲ್ ಆ್ಯಪನ್ನು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆ್ಯಪ್ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ನೀತಿ ಸಂಹಿತೆ ಉಲ್ಲಂಘನೆಗಳ ಫೋಟೋಗಳು ಅಥವಾ ವೀಡಿಯೊಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡಬೇಕು. ಅಗತ್ಯವಿದ್ದಲ್ಲಿ ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಬಹುದು. ಈ ಮಾಹಿತಿ ಅಧಿಕಾರಿಗಳಿಗೆ ತ್ವರಿತವಾಗಿ ರವಾನೆಯಾಗುತ್ತದೆ.

* ಏನೆಲ್ಲಾ ದೂರು ನೀಡಬಹುದು?

ಮತಗಳನ್ನು ಸೆಳೆಯಲು ಹಣ, ಉಡುಗೊರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೋಸ್ಟರ್ ಅಳವಡಿಕೆ, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದಾರಿತ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧದ ಅವಧಿಯಲ್ಲೂ ಪ್ರಚಾರ, ಮತಗಟ್ಟೆಗೆ ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್‌ನಲ್ಲಿ ದೂರು ಕೊಡಬಹುದು.

* 100 ನಿಮಿಷಗಳ ಒಳಗೆ ಕ್ರಮ:

ಈ ಆ್ಯಪ್‌ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಸಂಬಂಧಪಟ್ಟ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಫ್.ಎಸ್.ಟಿ. ತಂಡದವರಿಗೆ ಕಳುಹಿಸುತ್ತಾರೆ. ಅವರು ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗಾಗಿ ಕ್ರಮ ಕೈಗೊಳ್ಳುತ್ತಾರೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರ ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.

ದೂರಿನೊಂದಿಗೆ ದಾಖಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಇದರಿಂದ ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಲು ಸಾಧ್ಯವಾಗುತ್ತದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲು ಯಾವುದೇ ಚುನಾವಣೆ ಅಕ್ರಮ, ಆಮಿಷ ತಡೆಯಲು ಸಿವಿಜಿಲ್ ಬಳಸುವ ಮೂಲಕ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಿ, ಪ್ರಜಾಪ್ರಭುತ್ವವನ್ನು ದೃಢಗೊಳಿಸೋಣ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಡಿಎ ಮೈತ್ರಿ ಕೂಟದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಪತ್ರಕರ್ತರಿಗೆ ಸ್ಪಂದಿಸುತ್ತಿದ್ದ ಶಾಮನೂರು ಸದಾ ಸ್ಮರಣೀಯ