ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ಅಧ್ಯಕ್ಷರ ಆಯ್ಕೆ

KannadaprabhaNewsNetwork |  
Published : Jan 21, 2024, 01:33 AM IST
ದೊಡ್ಡಬಳ್ಳಾಪುರದ ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿಯ ಅರೆಹಳ್ಳಿ-ಗುಡ್ಡದಹಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿಯ ಅರೆಹಳ್ಳಿ-ಗುಡ್ಡದಹಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.

ನೂತನ ಅಧ್ಯಕ್ಷರಾಗಿ ಎನ್.ಎಸ್ ರಾಜು ಮತ್ತು ಉಪಾಧ್ಯಕ್ಷರಾಗಿ ಎನ್.ವೇಣು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್.ಎಸ್ ರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ವೇಣು ಬಿಟ್ಟರೆ ಉಳಿದವರಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.

ಕಳೆದ ಜ.14ರಂದು ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ನ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ 10 ಮಂದಿ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಓರ್ವ, ಅವಿರೋಧವಾಗಿ ಓರ್ವ ಸದಸ್ಯ ಆಯ್ಕೆಯಾಗಿದ್ದರು.

ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಮುಖಂಡರಾದ ಎನ್.ರಾಮಾಂಜಿನಪ್ಪ, ಜಯರಾಮರೆಡ್ಡಿ, ನಾರಾಯಣಮ್ಮ, ಗುಂಡಪ್ಪ, ಹನುಮಂತಗೌಡ, ಎ.ಮುನಿಯಪ್ಪ, ನಂಜೇಗೌಡ, ವೆಂಕಟೇಶ್, ರಾಜಣ್ಣ ಅಶ್ವತ್ಥನಾರಾಯಣ, ಪಟೇಲ್, ಶ್ರೀನಿವಾಸರೆಡ್ಡಿ ಅಭಿನಂದಿಸಿದರು.19ಕೆಡಿಬಿಪಿ4-

ದೊಡ್ಡಬಳ್ಳಾಪುರದ ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ