ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಆಯೋಗ ಕೇಳುವ ಮಾಹಿತಿ ನೀಡಿ
ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಚುನಾವಣಾ ಆಯೋಗ ಅಪೇಕ್ಷಿಸುವ ಮಾಹಿತಿಯನ್ನು ನಿಯಮಿತವಾಗಿ, ಕಾಲೋಚಿತವಾಗಿ ಜಿಲ್ಲೆಯಿಂದ ವರದಿಗಳನ್ನು ನಿಗದಿತ ಅವಧಿಯ ಒಳಗೆ ಸ್ಪಷ್ಟ ಹಾಗೂ ಖಚಿತವಾಗಿ ನೀಡಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವವರು ನಿಗದಿತ ಸಮಯಕ್ಕೆ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪಾಳಿ ಮೇಲೆ ಕರ್ತವ್ಯ ನಿರ್ವಹಿಸುವವರು ಇನ್ನೊಬ್ಬ ಅಧಿಕಾರಿ ಅಥವಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವವರೆಗೂ ಬಿಡುಗಡೆಯಾಗಬಾರದು ಎಂದು ತಿಳಿಸಿದರು.ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗಬಹುದು. ಚುನಾವಣಾ ನೀತಿ ಸಂಹಿತೆ ಅವಧಿಯಲ್ಲಿ, ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆಗೆ ಸಂಬಂಧಪಟ್ಟ ವೆಚ್ಚಗಳನ್ನು ನಿರಂತರವಾಗಿ ನಿಗಾ ಇಡಬೇಕು, ಯಾವ ವೆಚ್ಚ ನಿಯಮಾವಳಿ ರೀತ್ಯ ಇದೆ, ಅಕ್ರಮ ವೆಚ್ಚವಾಗಿದೆ. ಎನ್ನುವುದನ್ನು ಚುನವಣಾ ಆಯೋಗದ ನಿರ್ದೇಶನಗಳಂತೆ ಲೆಕ್ಕಹಾಕಿ ಮೇಲಿನ ಅಧಿಕಾರಿಗಳಿಗೆ ಕಾಲ ಕಾಲಕ್ಕೆ ಸಮರ್ಪವಾಗಿ ವರದಿ ಮಾಡಬೇಕು ಎಂದರು.
ಜಿ.ಪಂ.ಮುಖ್ಯ ನಿರ್ವಹಣಾಧಿಕಾರಿ ಪ್ರಕಾಶ ಜಿ.ಟಿ ನಿಟ್ಟಾಲಿ ಮಾತನಾಡಿ, ಚುನಾವಣಾಯ ನೀತಿ ಸಂಹಿತೆಯ ನಿಯಮಗಳನ್ನು ಯಾವುದೇ ವ್ಯಕ್ತಿ ಉಲ್ಲಂಘನೆ ಮಾಡಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಚುನವಣಾ ಆಯೋಗದ ನಿರ್ದೇಶನಗಳಂತೆ ತಮಗೆ ನಿಯೋಜಿತ ಕೆಲಸಗಳನ್ನು ಸರಿಯಾಗಿ ನಿರ್ವಹಿಸಬೇಕು, ಅಧಿಕಾರಿಗಳು ನಿಯಮಾವಳಿ ರೀತ್ಯಾ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಚುನಾವಣಾ ಕರ್ತವ್ಯಗಳಲ್ಲಿ ಲೋಪವಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಲೋಪಗಳನ್ನು ಚುನಾವಣಾ ಆಯೋಗ ಸಹಿಸುವುದಿಲ್ಲ. ಗೈರುಹಾಜರಾದಲ್ಲಿ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಚೆಕ್ಪೋಸ್ಟ್ನಲ್ಲಿ ಬಿಗಿ ತಪಾಸಣೆ
ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ ಮಾತನಾಡಿ, ಅಭ್ಯರ್ಥಿಗಳ ಚುನಾವಣಾ ವೆಚ್ಚಗಳಿಗೊ ಮಿತಿ ಇರುತ್ತದೆ. ಅವರು ಮಾಡಿರುವ ವೆಚ್ಚಗಳು ಮಿತಿಯ ಒಳಗೆ ಇವೆಯೇ, ಇಲ್ಲವೇ ಎಂಬುದನ್ನು ತಿಳಿಯಬೇಕಾದರೆ ಚುನಾವಣಾ ವೆಚ್ಚದ ಮೇಲೆ ನೀಗಾ ಇಡುವ ಎಂಸಿಎಂಸಿ, ವಿವಿಟಿ, ವಎಸ್ ಟಿ, ಎಸ್ ಎಸ್ ಟಿ, ಎಫ್ ಎಸ್ ಟಿ, ತಂಡಗಳ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾ ವೆಚ್ಚದ ಅಧಿಕಾರಿಗಳು ನಿಯಮಾವಳಿ ರೀತ್ಯಾ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಚುನಾವಣಾ ಕರ್ತವ್ಯಗಳಲ್ಲಿ ಲೋಪವಾಗುತ್ತದೆ ಎಂದರು.