ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅನಿವಾರ್ಯ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Feb 16, 2024, 01:50 AM IST
ಯಶಪಾಲ್15 | Kannada Prabha

ಸಾರಾಂಶ

ಉಡುಪಿಯಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಭವಿಷ್ಯದ ಮೀನುಗಾರಿಕೆಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆಯ ಅನಿವಾರ್ಯತೆ ಹಾಗೂ ಸವಾಲುಗಳ ಬಗ್ಗೆ ಕರಾವಳಿ ಜಿಲ್ಲೆಯ ಮೀನುಗಾರರಿಗೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯ ವ್ಯಕ್ತಪಡಿಸಿದರು.ಉಡುಪಿಯಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಭವಿಷ್ಯದ ಮೀನುಗಾರಿಕೆಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆಯ ಅನಿವಾರ್ಯತೆ ಹಾಗೂ ಸವಾಲುಗಳ ಬಗ್ಗೆ ಕರಾವಳಿ ಜಿಲ್ಲೆಯ ಮೀನುಗಾರರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ಮೀನುಗಾರಿಕಾ ದೋಣಿ ಹಾಗೂ ಬೋಟ್‌ಗಳು ಇಂಧನವಾಗಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಉತ್ಪನ್ನಗಳನ್ನು ಅವಲಂಬಿಸಿದ್ದು, ಸರ್ಕಾರ ಹಂತಹಂತವಾಗಿ ಈ ಇಂಧನಗಳನ್ನು ನಿಷೇಧಿಸಿ ಪರ್ಯಾಯವಾಗಿ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆಗೆ ಲಭ್ಯವಿರುವ ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸರ್ಕಾರದ ಮೂಲಕ ಆರ್ಥಿಕ ಸಹಕಾರ ನೀಡಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡಬೇಕು ಎಂದರು.ಸಭೆಯಲ್ಲಿ ಖಾಸಗಿ ಕಂಪನಿಯ ಪ್ರತಿನಿಧಿಗಳು ಮೀನುಗಾರಿಕೆಗೆ ಲಭ್ಯವಿರುವ ಎಲೆಕ್ಟ್ರಿಕ್ ಇಂಜಿನ್ ತಂತ್ರಜ್ಞಾನ, ಅನುಕೂಲತೆ ಹಾಗೂ ಲಭ್ಯತೆಗಳ ಬಗ್ಗೆ ಮೀನುಗಾರ ಮುಖಂಡರಿಗೆ ಮಾಹಿತಿ ನೀಡಿ, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದರು.

ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕಲ್ಲೇರ್ ಹಾಗೂ ಕರಾವಳಿ ಜಿಲ್ಲೆಯ ವಿವಿಧ ಮೀನುಗಾರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ