ಕನ್ನಡಪ್ರಭ ವಾರ್ತೆ ಮೈಸೂರು
ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದಸರಾ ಸಂದರ್ಭದಲ್ಲಿ ಮಾಡಲಾಗುವ ದೀಪಾಲಂಕಾರ ಎಲ್ಲರ ಗಮನ ಸೆಳೆಯಲಿದೆ. ಹೀಗಾಗಿ, ಈ ಬಾರಿಯ ದೀಪಾಲಂಕಾರವನ್ನು ಕಳೆದ ವರ್ಷಕ್ಕಿಂತ ಹೆಚ್ಚು ಆಕರ್ಷಕವಾಗಿ ಮಾಡಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ನಿಗಮದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ದಸರಾ ದೀಪಾಲಂಕಾರ ವಿಶ್ವಮಟ್ಟದಲ್ಲಿ ಆಕರ್ಷಣೀಯಗೊಳಿಸಲು ಸೆಸ್ಕ್ ಜೊತೆಗೆ ವಿದ್ಯುತ್ ಗುತ್ತಿಗೆದಾರರು ಪ್ರಮುಖ ಕಾರಣರಾಗಿದ್ದಾರೆ. ಈ ಬಾರಿಯೂ ದೀಪಾಲಂಕಾರದ ಬಗ್ಗೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ದಸರಾ ಆರಂಭದಲ್ಲಿ ಹಾಗೂ ದಸರಾ ಮುಗಿದ ಬಳಿಕವೂ ಎಲ್ಲರನ್ನೂ ಆಕರ್ಷಿಸುವ ದೀಪಾಲಂಕಾರವನ್ನು ಹೊಸತನದ ಜೊತೆಗೆ ಹೆಚ್ಚು ಆಕರ್ಷಕವಾಗಿ ಮಾಡುವ ಬಗ್ಗೆ ಈಗಿನಿಂದಲೇ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ದೀಪಾಲಂಕಾರವನ್ನು ಹೆಚ್ಚಿನ ಆಕರ್ಷಣೀಯವಾಗಿ ಮಾಡುವುದು ಮಾತ್ರವಲ್ಲದೇ ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ದೀಪಾಲಂಕಾರ ಮಾಡುವುದು ಮುಖ್ಯ ಎಂದು ಅವರು ಸಲಹೆ ನೀಡಿದರು.ದಸರಾ ದೀಪಾಲಂಕಾರದ ಸೌಂದರ್ಯ ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದವನ್ನು ಹೆಚ್ಚಿಸುವುದರ ಜತೆಗೆ ಸುರಕ್ಷತೆಗೂ ಆದ್ಯತೆ ನೀಡುವುದು ಮುಖ್ಯವಾಗಿದೆ. ದಸರಾ ವೇಳೆಯಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರಲಿದೆ. ಆದ್ದರಿಂದ ಮಳೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಯಾವುದೇ ತೊಂದರೆಗಳು ಉಂಟಾಗದಂತೆ ಎಚ್ಚರವಹಿಸಿ, ದೀಪಾಲಂಕಾರ ಮಾಡುವಲ್ಲಿ ಹೆಚ್ಚಿನ ಗಮನವಹಿಸಬೇಕೆಂದು ಎಂದರು.
ದಸರಾ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ ಈ ಬಾರಿ ಆಕರ್ಷಕ ರೀತಿಯಲ್ಲಿ ದೀಪಾಲಂಕಾರ ಮಾಡಲು ಚಿಂತನೆ ನಡೆಸಲಾಗಿದೆ. ಜೊತೆಗೆ ನಗರದಲ್ಲಿರುವ ವೃತ್ತಗಳಲ್ಲಿ ವಿನೂತನ ರೀತಿಯಲ್ಲಿ ದೀಪಾಲಂಕಾರ ಮಾಡಬೇಕೆಂದು ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯವಿರುವ ರೂಪುರೇಷೆಗಳು, ಕೆಲವೊಂದು ಡಿಸೈನ್ ಗಳನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳ ಸುತ್ತಲಿನ ರಸ್ತೆಗಳು ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಹೆಚ್ಚಿನ ಆಕರ್ಷಣೆಯಿಂದ ಕೂಡಿರಬೇಕಿದೆ. ಯುವ ಸಂಭ್ರಮ ಕಾರ್ಯಕ್ರಮ ದಸರಾ ಆರಂಭಕ್ಕೂ ಮೊದಲೇ ನಡೆಯುವುದರಿಂದ ಈ ಸ್ಥಳದಲ್ಲಿ ಮಾಡಲಾಗುವ ದೀಪಾಲಂಕಾರ ಎಲ್ಲರ ಆಕರ್ಷಣೆ ಮತ್ತು ಕುತೂಹಲವನ್ನು ಹೆಚ್ಚುವಂತೆ ಮಾಡುತ್ತದೆ. ಆದ್ದರಿಂದ ಈ ಭಾಗಗಳಲ್ಲಿ ದೀಪಾಲಂಕಾರ ಮಾಡುವವರು ಇದನ್ನು ಗಮನದಲ್ಲಿಟ್ಟುಕೊಂಡು ದೀಪಾಲಂಕಾರ ಮಾಡಬೇಕಿದೆ ಎಂದರು.
----
ಡ್ರೋನ್ ಶೋಗೆ ಇನ್ನಷ್ಟು ಮೆರಗು
- ಕೆ.ಎಂ. ಮುನಿಗೋಪಾಲ್ ರಾಜು, ಸೆಸ್ಕ್ ಎಂಡಿ