ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಅವರು ಮಾತನಾಡಿದರು.
ಕೆಲವೂಂದು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಲಭವಾಗಿ ಹಣ ಮಾಡುವ ಯೋಜನೆ, ಯೋಚನೆಗಳಿಗೆ ಮಾರು ಹೋಗದೆ, ಸ್ವಯಂ ಶಿಸ್ತು ಅಳವಡಿಸಿಕೊಂಡು ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮ ತರಬೇತಿ ಪಡೆದುಕೊಂಡಿದ್ದೀರಿ. ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ಸು ಗಳಿಸಿ ಎಂದರು.ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ನಿರೂಪಿಸಿದರು. ಅಬ್ರಹಾಂ ಜೇಮ್ಸ್ ವಂದಿಸಿದರು. ಸುಮಾರು 33 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.