ವಿದ್ಯುತ್‌ ಶಾರ್ಟ್ ಸರ್ಕ್ಯೂಟ್: ಹುಲ್ಲಿನ ಮೆದೆ ಬೆಂಕಿಗಾಹುತಿ

KannadaprabhaNewsNetwork |  
Published : Feb 24, 2025, 12:35 AM IST
23ಕೆಆರ್ ಎಂಎನ್ 3.ಜೆಪಿಜಿಕುದೂರು ಹೋಬಳಿ ಕೆಂಚನಪುರ ಗ್ರಾಮದಲ್ಲಿ ಹುಲ್ಲಿನ ಮೆದೆ ಬೆಂಕಿಗಾಹುತಿಯಾಗಿರುವುದು. | Kannada Prabha

ಸಾರಾಂಶ

ಮೆದೆಯ ಮುಂಭಾಗ ವಿದ್ಯುತ್ ಕಂಬವಿದ್ದು ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಇಡೀ ತೋಟ ಮತ್ತು ಪಕ್ಕದಲ್ಲೇ ಮನೆಯಿದ್ದುದರಿಂದ ಅದಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿತ್ತು,

ಕುದೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಹುಲ್ಲಿನ ಮೆದೆ ಭಸ್ಮಗೊಂಡಿರುವ ಘಟನೆ ಕುದೂರು ಹೋಬಳಿ ಕೆಂಚನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀನಿವಾಸ್ ಅವರಿಗೆ ಸೇರಿದ ಹುಲ್ಲಿನ ಮೆದೆ ಬೆಂಕಿಗಾಹುತಿಯಾಗಿದೆ. ಒಂದು ದಿನದ ಮುಂಚೆ ರಾಗಿ ಕಣ ಮಾಡಿ ಆ ಹುಲ್ಲನ್ನು ರಾಸುಗಳಿಗಾಗಿ ಮೆದೆ ಹಾಕಲಾಗಿತ್ತು. ಮೆದೆಯ ಮುಂಭಾಗ ವಿದ್ಯುತ್ ಕಂಬವಿದ್ದು ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಇಡೀ ತೋಟ ಮತ್ತು ಪಕ್ಕದಲ್ಲೇ ಮನೆಯಿದ್ದುದರಿಂದ ಅದಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿತ್ತು, ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವಿಷಯ ತಿಳಿದ ಸ್ಥಳಕ್ಕಾಗಮಿಸಿದ ಮಾಗಡಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಒಂದೆರೆಡು ತೆಂಗಿನ ಮರಗಳು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದ್ದನ್ನು ಬಿಟ್ಟರೆ ಅದೃಷ್ಟವಶಾತ್ ಯಾವುದೇ ಅನಾಹುತ ಆಗಲಿಲ್ಲ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಇತ್ಯರ್ಥಕ್ಕೆ ಕಾಂಗ್ರೆಸ್‌ ಶಾಸಕರಿಂದ ಒತ್ತಡ
ರಾಣಿ ಚನ್ನಮ್ಮ ನಾಟ್ಯ ಮಂದಿರ ಶೀಘ್ರ ಪ್ರಾರಂಭಿಸಿ