ಕನ್ನಡಪ್ರಭ ವಾರ್ತೆ, ಯಳಂದೂರು
ಆದರೆ ಅಷ್ಟೊತ್ತಿಗಾಗಲೇ ಇವರ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಕ್ಯಾಮರಾ, ಕಂಪ್ಯೂಟರ್, ವಾದ್ಯ ಪರಿಕರಗಳು, ಎಲೆಕ್ಟ್ರಿಕ್ ವಸ್ತುಗಳು ಹಾಗೂ ಗೃಹಪಯೋಗಿ ಸಾಮಾನುಗಳು ಹಾಗೂ ಹೆಂಚಿನ ಮೇಲ್ಭಾವಣಿಯಲ್ಲಿದ್ದ ಮರಮಟ್ಟುಗಳು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲವಾದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಸಂಬಂಧ ಮಂಜುನಾಥ್ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಸಂಬಂಧ ಸೆಸ್ಕ್ನ ಸಹಾಯಕ ಕಾರ್ಯಪಾಲಕ ಅಭಿಯಂತರ ಲಿಂಗರಾಜು ರವರಿಗೆ ಹಲವು ಬಾರಿ ದೂರವಾಣಿ ಕರೆ ಮಾಡಿದರೂ ಕೂಡ ಇವರು ಸ್ಥಳಕ್ಕೆ ಭೇಟಿ ನೀಡಿಲ್ಲ. ಅಥವಾ ಸಂಬಂಧಪಟ್ಟ ಜೆಇ ರನ್ನಾಗಲೀ, ಸಿಬ್ಬಂಧಿಯಾಗಲಿ ಕಳುಹಿಸಿಲ್ಲ ಎಂಬುದು ಮಂಜುನಾಥ್ರವರ ಆರೋಪವಾಗಿದೆ.
ಸ್ಥಳಕ್ಕೆ ಶಾಸಕ ಎ. ಆರ್. ಕೃಷ್ಣಮೂರ್ತಿ ಭೇಟಿ ನೀಡಿ ಮಂಜುನಾಥ್ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ದೂರು ನೀಡಿ, ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಇವರೂ ಕೂಡ ಖುದ್ದು ಸೆಸ್ಕ್ ಎಇಇಗೆ ಪರಿಶೀಲನೆ ನಡೆಸಿ ಸೂಚನೆ ನೀಡಿದ್ದಾರೆ. ಆದರೂ ಕೂಡ ಇವರು ಬಂದಿಲ್ಲ ಎಂದು ಚಿಕ್ಕನಂಜಮ್ಮ ಕುಟುಂಬದವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.