ದೊಡ್ಡಬಳ್ಳಾಪುರ: ವಿದ್ಯುತ್ ಕ್ಷೇತ್ರ ಖಾಸಗೀಕರಣ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಇದರ ವಿರುದ್ಧ ಮಹಾಲಿಂಗಪುರದಲ್ಲಿ ನಡೆಯುತ್ತಿದ್ದ ಹೋರಾಟದ ವೇಳೆ ನೇಕಾರ ಮುಖಂಡರ ಮೇಲೆ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್ ಆಗ್ರಹಿಸಿದರು.
ಟಾಟಾ ಪವರ್ ಸಂಸ್ಥೆ ವಿದ್ಯುತ್ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಇಂಧನ ಇಲಾಖೆ ಜೊತೆ ಸಮಾಲೋಚಿಸದೆ ವಿದ್ಯುತ್ ವಿತರಣೆ ಮಾಡುತ್ತಿರುವ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಅಭಿಪ್ರಾಯ ಪರಿಗಣಿಸದೆ ಖಾಸಗಿ ವಿದ್ಯುತ್ ವಿತರಣಾ ಕಂಪನಿ ನೇರವಾಗಿ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿರುವುದು ವಿದ್ಯುತ್ ಕಾಯ್ದೆ-2003ರ ಗಂಭೀರ ಉಲ್ಲಂಘನೆ ಆಗಿದೆ. ಟಾಟಾ ಪವರ್ ಕಂಪನಿಯ ಅರ್ಜಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ:ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಜೂನ್ 17ರಂದು ವಿದ್ಯುತ್ ಖಾಸಗೀಕರಣದ ವಿರುದ್ಧ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿಯ ಅಡಿಯಲ್ಲಿ ರೈತರು, ನೇಕಾರರು, ಕಾರ್ಮಿಕರು ಸೇರಿ ಹೆಸ್ಕಾಂ ಕಚೇರಿ ಮುಂದೆ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಶಾಸಕರಾದ ಸಿದ್ದುಸವದಿ ಮತ್ತು ಅವರ ಹಿಂಬಾಲಕರು ಕೇಂದ್ರ ಸರ್ಕಾರದ ವಿರುದ್ಧ ಪ್ರಸ್ತಾಪ ಮಾಡಬಾರದು ಎಂದು ಹೇಳಿ ನೇಕಾರ ಮುಖಂಡ ಶಿವಲಿಂಗ ಟರ್ಕಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಧರ್ಮಾವರಂಗೆ ರೈಲು ಕಲ್ಪಿಸಿ:
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಆರ್.ಎಸ್.ಶ್ರೀನಿವಾಸ್, ಸಹ ಕಾರ್ಯದರ್ಶಿ ಎನ್.ಮುನಿರಾಜು, ರಾಮು, ಚೌಡಯ್ಯ, ದೂಡ್ಡಬಳ್ಳಾಪುರ ಟೆಕ್ಸ್ ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಬಿ.ಆರ್.ಬಾಬು, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್ ಮಾತನಾಡಿದರು.