ಕಾಜೂರು ಗ್ರಾಮದಲ್ಲಿ ಕಾಡಾನೆ ದಾಳಿ, ನಷ್ಟ

KannadaprabhaNewsNetwork |  
Published : Jul 29, 2024, 12:47 AM IST
ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ ಕಾಡಾನೆ ಧಾಳಿಯಿಂದಾಗಿ ನಷ್ಟ | Kannada Prabha

ಸಾರಾಂಶ

ಕಾಜೂರು ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಷ್ಟ ಸಂಭವಿಸಿದೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುದು ತಿಳಿಯುವುದಿಲ್ಲ.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಇಲ್ಲಿಗೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ ಸಂಜೆ ವೇಳೆ ಕಾಡಾನೆ ಹಾವಳಿಯಿಂದ ನಷ್ಟವಾಗಿದೆ.

ಕಾಜೂರು ಗ್ರಾಮದ ವಿಶ್ವನಾಥ್ ಎಂಬುವವರ ಮನೆ ಹಾಗೂ ಶೆಡ್ ಮೇಲೆ ದಾಳಿ ನಡೆಸಿರುವ ಆನೆ, ಮನೆ ಮೇಲ್ಛಾವಣಿ, ಶೆಡ್ ಧ್ವಂಸಗೊಳಿಸಿ, ಅದರಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಪುಡಿಗಟ್ಟಿದೆ.

ಈ ಭಾಗದಲ್ಲಿ ಹಗಲಿನಲ್ಲಿಯೇ ಕಾಡಾನೆಗಳು ದಾಳಿ ನಡೆಸುತ್ತಿದ್ದು, ಜನರು ಭಯ ಭೀತರಾಗಿದ್ದಾರೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುವುದೇ ತಿಳಿಯುವುದಿಲ್ಲ. ಇದರಿಂದಾಗಿ ಕೃಷಿ ಕೆಲಸಗಳಿಗೂ ಹಿನ್ನೆಡೆಯಾಗಿದೆ. ಜನರು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದ್ದು, ಕೂಡಲೇ ಆನೆಗಳನ್ನು ಕಾಡಿಗಟ್ಟುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ತೊಡಕು ಹಿನ್ನೆಲೆಯಲ್ಲಿ ಮುಂಜಾನೆಯೇ ಮಾಂಸದಂಗಡಿ ಮುಂದೆ ಜನರ ಸರದಿ ಸಾಲು
ಬೆಂಗಳೂರು ನಗರದಲ್ಲಿ ರಂಜಾನ್‌ ಆಚರಣೆ ಭರದ ಸಿದ್ಧತೆ