ರಿಪ್ಪನ್ಪೇಟೆ: ಅರಸಾಳು ವಲಯ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಖೈರದವರ ಮನೆ ಶಿವಾನಂದ ಎಂಬವರ ಅಡಕೆ ತೋಟಕ್ಕೆ ಆನೆ ದಿಢೀರ್ ದಾಳಿ ನಡೆಸಿ, ಅಡಕೆ ಗಿಡ ಮತ್ತು ಬಾಳೆ ಬೆಳೆಯನ್ನು ಸಂಪೂರ್ಣ ನಾಶಗೊಳಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಇಂದು ಬೆಳಗ್ಗೆ ರೈತ ತನ್ನ ತೋಟಕ್ಕೆ ಹೋಗಿ ನೋಡಿದಾಗ ಅಡಕೆ, ಬಾಳೆ ಬೆಳೆ ಹಾನಿಯಾಗಿದ್ದು ಕಂಡು ಕಂಗಾಲಾಗಿದ್ದಾರೆ. ಇದರಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ರೈತರ ಬೆಳೆ ಹಾನಿಗೊಳಿಸುತ್ತಿರುವ ಆನೆಯನ್ನು ಸೆರೆಹಿಡಿದು ಸ್ಥಳಾಂತರಿಸಲು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಭೇದುಲ್ಲಾ ಷರೀಫ್, ಗ್ರಾಪಂ ಸದಸ್ಯ ಮಹಮ್ಮದ್ ಷರೀಫ್ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಭೇಟಿ ನೀಡಿ, ಹಾನಿಗೀಡಾಗಿದ ಅಡಕೆ ಮತ್ತು ಬಾಳೆಯನ್ನು ಪರಿಶೀಲಿಸಿದರು. ತಕ್ಷಣ ಸರ್ಕಾರ ನೊಂದ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. - - - -16ಆರ್ಪಿಟಿ1ಪಿ: