ಎಂಎಂಹಿಲ್ಸ್‌ ರಸ್ತೆಯಲ್ಲಿ ಕಾಡಾನೆಗಳ ಕಾರುಬಾರು!

KannadaprabhaNewsNetwork |  
Published : Feb 21, 2026, 01:45 AM IST
ಮಲೆ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ | Kannada Prabha

ಸಾರಾಂಶ

ತಾಲೂಕಿನ ವಡೆಕಹಳ್ಳದ ಸಂತೆಖಾನೆ ಸಮೀಪದ ಮಲೆ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಆನೆಗಳ ಹಿಂಡು ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ವಡೆಕಹಳ್ಳದ ಸಂತೆಖಾನೆ ಸಮೀಪದ ಮಲೆ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಆನೆಗಳ ಹಿಂಡು ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಗುರುವಾರ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿನ ಮುಂದೆ ಬಂದ ಕಾಡಾನೆಗಳು ಕೆಲಕಾಲ ರಸ್ತೆ ಮಧ್ಯೆ ನಿಂತಿದ್ದವು. ಇದರಿಂದಾಗಿ ವಾಹನಗಳು ನಿಂತು, ಪ್ರಯಾಣಿಕರಲ್ಲಿ ಭಯದ ವಾತಾವರಣ ಉಂಟಾಯಿತು.

ಕೆಲ ಸಮಯದ ಬಳಿಕ ಕಾಡಾನೆಗಳು ಕಾಡಿನತ್ತ ಮರಳಿದ ನಂತರ ವಾಹನ ಸವಾರರು ತಮ್ಮ ಪ್ರಯಾಣವನ್ನು ಮುಂದುವರಿಸಿದರು.ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳು ಹಾಗೂ ವಾಹನ ಸವಾರರು ಈ ಭಾಗದಲ್ಲಿ ಸಂಚರಿಸುವ ವೇಳೆಯಲ್ಲಿ ಎಚ್ಚರಿಕೆಯಿಂದ ಪ್ರಯಾಣಿಸಬೇಕು ಹೀಗಾಗಿ ಕಾಡಾನೆಗಳ ಬಗ್ಗೆ ಎಚ್ಚರಿಕೆಯಿಂದ ತೆರಳಬೇಕು ಎಂದು ಮನವಿ ಮಾಡಿದ್ದಾರೆ.

ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯ ಮಾರ್ಗ ಮಧ್ಯ ಸಂತೆ ಖಾನೆ ಬಳಿ ಕಾಡಾನೆಗಳ ಹಿಂಡು ಮರಿಗಳ ಜೊತೆ ರಸ್ತೆ ದಾಟುವುದನ್ನು ಪ್ರಯಾಣಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಮಾದಪ್ಪನ ಭಕ್ತಾದಿಗಳು ಹಾಗೂ ವಿವಿಧ ಗ್ರಾಮಕ್ಕೆ ತೆರಳುವ ಪ್ರಯಾಣಿಕರು ಎಚ್ಚರಿಕೆಯಿಂದ ತೆರಳಬೇಕು ಎಂದು ಮನವಿ ಮಾಡಿದ್ದಾರೆ ..20ಸಿಎಚ್ಎನ್‌16ಮತ್ತು17

ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯ ಸಂತೆ ಖಾನೆ ಬಳಿ ಕಾಡಾನೆಗಳ ಹಿಂಡು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರಂತರ ಚಿರತೆ ಹಾವಳಿ: ರೈತರಲ್ಲಿ ತಪ್ಪದ ಭೀತಿ
ಸಾಮಾಜಿಕ ನ್ಯಾಯದ ಪ್ರತಿಪಾದಕ ಕವಿ ಸರ್ವಜ್ಞ: ಸಿ.ಎಸ್.ಚಂದ್ರಭೂಪಾಲ