ಬೃಹತ್ ಯೋಗ ಪ್ರದರ್ಶನ । 3500 ಜನರು ಭಾಗಿ । ಸಚಿವ ಎಸ್ಸೆಸ್ಸೆಂ ಉದ್ಘಾಟನೆ
‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೃಹತ್ ಯೋಗ ಪ್ರದರ್ಶನವನ್ನು ಜೂ.21ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 5.30ರಿಂದ 6ರವರೆಗೆ ಬ್ರಹ್ಮಕುಮಾರಿ ಸಂಸ್ಥೆಯಿಂದ ಧ್ಯಾನ, ಬೆಳಿಗ್ಗೆ 6ರಿಂದ 6.20ರ ವರೆಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಅಷ್ಟ ನಮಸ್ಕಾರ ಹಾಗೂ 7ರಿಂದ ಉದ್ಘಾಟನೆಯ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.ನಂತರ ಸಾಮಾನ್ಯ ಯೋಗ ಶಿಷ್ಟಾಚಾರ ಮಾಡಲಾಗುವುದು. ಯೋಗ ದಿನಾಚರಣೆಯಲ್ಲಿ ನಗರದ ಶಾಲಾ-ಕಾಲೇಜು-ಹಾಸ್ಟೆಲ್ ವಿದ್ಯಾರ್ಥಿಗಳು, ಎಲ್ಲಾ ಯೋಗ ಸಂಸ್ಥೆಗಳು, ಯೋಗಾಸಕ್ತರು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ 3500ಕ್ಕೂ ಅದಿಕ ಜನರು ಪಾಲ್ಗೊಳ್ಳುವರು. ಜಿಲ್ಲಾದ್ಯಂತ 35 ಶಾಲಾ-ಕಾಲೇಜುಗಳಲ್ಲಿ ಪ್ರತಿನಿತ್ಯ ಯೋಗಾಭ್ಯಾಸ ನಡೆಸಲಾಗುತ್ತಿದೆ ಎಂದು ಹೇಳಿದರು.
ಯೋಗದಲ್ಲಿ ಯೋಗಾ ಪಾಥ್, ಯೋಗ ಸಂಗಮದಿಂದ ಯೋಗ ತರಬೇತಿ ನೀಡಲಾಗುವುದು. ಯೋಗ ಮಾಡುವುದರಿಂದ ಮಾನಸಿಕ ಹಾಗೂ ದೈಹಿಕ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ಜಿಲ್ಲಾದ್ಯಂತ 36 ಶಾಲಾ ಕಾಲೇಜುಗಳಲ್ಲಿ ನಿತ್ಯ ಯೋಗಾಭ್ಯಾಸ ನಡೆಸಲಾಗುತ್ತಿದೆ ಎಂದರು.
ರಸ್ತೆ ಅಪಘಾತ: ಸಾವಿನ ಪ್ರಮಾಣ ಶೇ.30 ಇಳಿಕೆ
ನಗರ, ಜಿಲ್ಲಾದ್ಯಂತ ರಸ್ತೆ ಅಪಘಾತ ಪ್ರಕರಣ ಕಡಿಮೆ ಮಾಡಲು, ಸಾವಿನ ಪ್ರಮಾಣ ತಡೆಯುವ ಉದ್ದೇಶದಿಂದ ಸಂಚಾರಿ ನಿಯಮಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ ಎಂದರು.
ದಾವಣಗೆರೆ ಮಹಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಜೆಯಾದರೆ ಮದ್ಯ, ಮಾದಕ ವ್ಯಸನಿಗಳು ಹಾವಳಿ ಹೆಚ್ಚಾಗುತ್ತಿದ್ದು, ಹದಡಿ ರಸ್ತೆಯ ವಿದ್ಯಾರ್ಥಿ ಭವನದಿಂದ ಬಾಪೂಜಿ ಆಸ್ಪತ್ರೆವರೆಗೆ ಕೆಲವು ಹೋಟೆಲ್ಗಳಿಂದ ವಾಹನ ಸಂಚಾರ, ಜನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ.