ಕನ್ನಡಪ್ರಭ ವಾರ್ತೆ ಮಂಗಳೂರು
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಈ ನೂತನ ಯೋಜನೆಯಡಿ ಜಿಲ್ಲೆಯಲ್ಲಿ 2.5ರಿಂದ 3 ಸಾವಿರದಷ್ಟು ಸಂಸ್ಥೆಗಳ ನೋಂದಣಿ ಗುರಿಯನ್ನು ಹಾಕಿಕೊಳ್ಳಲಾಗಿದೆ. ಈ ಮೂಲಕ 25 ಸಾವಿರದಷ್ಟು ಉದ್ಯೋಗಿಗಳಿಗೆ ಇದರ ಲಾಭ ದೊರೆಯುವ ನಿರೀಕ್ಷೆಯಿದೆ ಎಂದರು.
ಪ್ರಮುಖವಾಗಿ ಉತ್ಪಾದನಾ ವಲಯ ಸೇರಿದಂತೆ ಎಲ್ಲ ವಲಯಗಳಲ್ಲಿ ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು, ಉದ್ಯೋಗಾವಕಾಶದೊಂದಿಗೆ ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಯೋಜನೆಯ ಕುರಿತು ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಲ್ಲಿ ಜಾಗೃತಿ ಮೂಡಿಸಲು ಭವಿಷ್ಯನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿಯಿಂದ ಜಿಲ್ಲೆಯ ವಿವಿಧೆಡೆ ಶಿಬಿರಗಳನ್ನು ಆಯೋಜಿಸುತ್ತಿದೆ. ಪ್ರತಿ ತಿಂಗಳು ಎರಡು ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜೀಬ್ ಮುಖರ್ಜಿ ವಿವರಿಸಿದರು.ಯೋಜನೆ ಪ್ರಯೋಜನವೇನು?:
2024-25ರ ಕೇಂದ್ರ ಬಜೆಟ್ನಲ್ಲಿ ಯೋಜನೆ ಘೋಷಣೆಯಾಗಿದ್ದು, ಅ.1ರಿಂದ ಕಾರ್ಯಾರಂಭವಾಗಲಿದೆ. ದೇಶದ 4.1 ಕೋಟಿ ಯುವಕರಿಗೆ ಉದ್ಯೋಗವಕಾಶ ಸೃಷ್ಟಿಸುವ ಈ ಪ್ಯಾಕೇಜ್ಗಾಗಿ 2 ಲಕ್ಷ ಕೋಟಿ ರು. ಅನುದಾನ ಮೀಸಲಿರಿಸಲಾಗಿದೆ. ಇದರಲ್ಲಿ 99,446 ಕೋಟಿ ರು. ವೆಚ್ಚದೊಂದಿಗೆ 2 ವರ್ಷಗಳಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಕನಿಷ್ಠ ವೇತನದಿಂದ 1 ಲಕ್ಷ ರು.ವರೆಗೆ ವೇತನ ಪಡೆಯುವ ಉದ್ಯೋಗಿಗಳು ಈ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಈ ಎಲ್ಲ ಉದ್ಯೋಗಿಗಳಿಗೆ ಹಾಗೂ ಉದ್ಯೋಗದಾತರಿಗೂ ನಿಗದಿತ ಪ್ರೋತ್ಸಾಹಧನ ಸಿಗಲಿದೆ. ಉಳಿದೆಲ್ಲ ವಲಯಗಳಿಗೆ ಗರಿಷ್ಠ 2 ವರ್ಷ ಪ್ರೋತ್ಸಾಹಧನ ನೀಡಿದರೆ, ಉತ್ಪಾದನಾ ವಲಯಕ್ಕೆ ಮಾತ್ರ 3- 4 ವರ್ಷಗಳವರೆಗೆ ಯೋಜನೆಯ ಲಾಭ ದೊರೆಯಲಿದೆ ಎಂದು ಮುಖರ್ಜಿ ತಿಳಿಸಿದರು.ಅಕೌಂಟ್ಸ್ ಆಫೀಸರ್ ಯು.ಪಾಂಡುರಂಗ ಕಿಣಿ, ಅಧಿಕಾರಿಗಳಾದ ನಾಗೇಂದ್ರ ಬಾಬು ಗುಟ್ಟಿ, ಬೆನ್ನಿ ಲೋಬೊ, ಅನಿತಾ ಆರ್. ಇದ್ದರು.