ಅಳ್ನಾವರ: ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೋಳ್ಳಿ ಎಂದು ಅಳ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ ಅಧಿಕಾರಿಗಳಿಗೆ ಮತ್ತು ಸಮಿತಿ ಸದಸ್ಯರಿಗೆ ಸೂಚಿಸಿದರು.
ಕಡಬಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೧೨೯೮ ಗೃಹಲಕ್ಷಿ ಫಲಾನುಭವಿಗಳಿದ್ದು ಐವರು ಯೋಜನೆಯಿಂದ ಹೊರಗುಳಿದಿದ್ದಾರೆ. ತಾಂತ್ರಿಕ ಸಮಸ್ಯೆ ಬಗೆಹರಿಸಿ ಯೋಜನೆ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಧಾ ಶಿರೋಳಕರ ತಿಳಿಸಿದರು.
ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ೮೦೪೨ ಫಲಾನುಭವಿಗಳಿದ್ದಾರೆ. ಇವರಲ್ಲಿ ೭೮೭೨ ಜನ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದ ಆಹಾರ ನಿರೀಕ್ಷಕ ವಿನಾಯಕ ದೀಕ್ಷಿತ ಅವರು ವಿಟಾಮಿನ್ಯುಕ್ತ ಅಕ್ಕಿಯನ್ನು ಬೆರೆಸಿ ವಿತರಣೆ ಮಾಡುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಇರುವ ಪ್ಲಾಸ್ಟಿಕ ಅಕ್ಕಿಯ ಕಲ್ಪನೆ ದೂರ ಮಾಡಿಕೊಳ್ಳಬೇಕು ಎಂದರು.ತಾಪಂ ಯೋಜನಾಧಿಕಾರಿ ಪ್ರಕಾಶ ಹಾಲಮತ, ಗ್ರಾಪಂ ಅಧ್ಯಕ್ಷ ರಾಜಶೇಖರ ಬೇಕ್ವಾಡಕರ, ಪಿಡಿಒ ಆನಂದ ಪಾಟೀಲ, ಕಾರ್ಯದರ್ಶಿ ಷಣ್ಮುಖ ಸುಳಗೇಕರ, ಹೆಸ್ಕಾಂ ಶಾಖಾಧಿಖಾರಿ ಕೆ.ಎಲ್. ನಾಯಕ, ಸಾರಿಗೆ ನಿಯಂತ್ರಣಾಧಿಕಾರಿ ಸುರೇಶ ಕಲ್ಲವಡ್ಡರ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಮತ್ತಿತರರು ಇದ್ದರು.