ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅನನ್ಯ ಕ್ರಿಯೇಷನ್ಸ್ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಸಂಗೀತ, ಸಾಹಿತ್ಯ, ಕೃಷಿ ಸಂವಾದದಲ್ಲಿ ಸಂವಿಧಾನ ಮತ್ತು ಮುಂದೇನು ಕುರಿತು ಮಾತನಾಡಿದರು.
ಪ್ರಸ್ತುತ ಪ್ರಜಾಪ್ರಭುತ್ವ ಹಾಗೂ ಸಂವಿಧಾನದಡಿಯಲ್ಲಿ ದೇಶ ಸಮಾನತೆಯಿಂದ ಸಾಗಬೇಕಾಗಿದೆ. ತೊಂದರೆಗಳು, ಸಮಸ್ಯೆಗಳು ನಮ್ಮ ಅವಿವೇಕತನದಿಂದಲೇ ಹುಟ್ಟಿಕೊಳ್ಳುತ್ತವೆ. ತೊಂದರೆಗೆ ಅವಿವೇಕತನವೇ ಮುಖ್ಯ ಕಾರಣವಾಗಿದೆ. ಆದ್ದರಿಂದ ವಿವೇಕದಿಂದ ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದರು.ಯುವಜನತೆ ಹೊಸ ಸಮಾಜ ಕಟ್ಟಲು ಅರ್ಪಣಾ ಮನೋಭಾವ ಅಗತ್ಯವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೌಢ್ಯ, ಅಸಮಾನತೆ, ಹೆಣ್ಣು ಭ್ರೂಣಹತ್ಯೆ, ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಇದಕ್ಕೆ ಅರಿವಿನ ಕೊರತೆಯೇ ಕಾರಣವಾಗಿದೆ. ನಿತ್ಯ ಸಚಿವ ಕೆ.ವಿ.ಶಂಕರಗೌಡ ರಂತಹ ನಾಯಕರು ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಸಹಕಾರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇದರಿಂದ ಜಿಲ್ಲೆ ಸುಶಿಕ್ಷಿತವಾಗಿದೆ. ಅಂಥವರ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಾಗಿದೆ ಎಂದು ಸಲಹೆ ನೀಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿಂದುಳಿದ, ದಲಿತ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು. ಬ್ರಿಟಿಷರು ದೇಶಕ್ಕೆ ಬಂದಿದ್ದರಿಂದ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಆಗಿವೆ. ಸಮಾಜದಲ್ಲಿ ಮೌಢ್ಯ, ಅಸಮಾನತೆ ತೊಲಗಬೇಕು. ಅಪರಾಧ ಇಲ್ಲದೆ ಇದ್ದರೆ ಆಗ ಎಲ್ಲರೂ ನೆಮ್ಮದಿಯಿಂದ ಬದುಕಬಹುದು. ಇದರಿಂದ ಒಬ್ಬ 120 ವರ್ಷ ಜೀವನ ಮಾಡಬಹುದು. ಅದಕ್ಕಾಗಿ ದೇವರಾಗಿರುವ ಶಿವನ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಅನನ್ಯ ಕ್ರಿಯೇಷನ್ಸ್ ಅವರು ಇಂಥ ಸಂವಾದಗಳನ್ನು ಜಿಲ್ಲೆಯಲ್ಲಿ ಮಾಡುತ್ತಿರುವುದು ಉತ್ತಮ ಶ್ಲಾಘನೀಯವಾಗಿದೆ. ಇಂಥ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಆಗ ಜನರಿಗೆ ಅರಿವು ಮೂಡಿಸಲು ಸಾಧ್ಯವಾಗಲಿದೆ ಎಂದರು.
ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಸಬೇಕಾಗಿದೆ. ಪ್ರಜಾಪ್ರಭುತ್ವದಲ್ಲಿ ಖಾಸಗಿ ಪ್ರಭುತ್ವ ಹೆಚ್ಚಾಗುತ್ತಿದೆ. ಅಂಥ ಕೆಲಸದಲ್ಲಿ ಕೆಲವರು ನಿರತರಾಗಿದ್ದಾರೆ. ಅದಕ್ಕೆ ಅವಕಾಶ ಕೊಡದಂತೆ ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕು ಎಂದರು.