ಸಮಾಜಮುಖಿ ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ: ಚೊಕ್ಕಬಸವನಗೌಡ

KannadaprabhaNewsNetwork |  
Published : Apr 04, 2025, 12:45 AM IST
ಸಿರುಗುಪ್ಪ ನಗರದ ಪಿ.ಎಲ್.ಡಿ ಬ್ಯಾಂಕ್ ಆವರಣದಲ್ಲಿ ಜರುಗಿದ ಡಾ.ಶಿವಕುಮಾರ ಸ್ವಾಮಿಜೀಯವರ 118ನೇ ಜನ್ಮದಿನ ಕಾರ್ಯಕ್ರಮಕ್ಕೆ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕಬಸವನಗೌಡ ಅವರು ಚಾಲನೆ ನೀಡಿದರು.  | Kannada Prabha

ಸಾರಾಂಶ

ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳು ನಾಡು ಕಂಡ ಅತ್ಯಂತ ಶ್ರೇಷ್ಠ ಸಂತ ಎನಿಸಿಕೊಂಡಿದ್ದಾರೆ.

ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಡಾ. ಶಿವಕುಮಾರ ಶ್ರೀಗಳ ಜನ್ಮದಿನ

ಕನ್ನಡಪ್ರಭ ವಾರ್ತೆ ಸಿರುಗುಪ್ಪ

ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳು ನಾಡು ಕಂಡ ಅತ್ಯಂತ ಶ್ರೇಷ್ಠ ಸಂತ ಎನಿಸಿಕೊಂಡಿದ್ದಾರೆ. ಎಲ್ಲ ಸಮುದಾಯಗಳ ಏಳ್ಗೆಗಾಗಿ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಿ, ಅಕ್ಷರ ದಾಸೋಹ ಕೈಗೊಂಡ ಮಹಾನ್ ಪುಣ್ಯಾತ್ಮರಾಗಿದ್ದಾರೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕಬಸವನಗೌಡ ತಿಳಿಸಿದರು.

ಇಲ್ಲಿನ ಪಿ.ಎಲ್.ಡಿ ಬ್ಯಾಂಕ್ ಆವರಣದಲ್ಲಿ ಸಿದ್ದಗಂಗಾಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜನ್ಮದಿನದ ಕಾಯಕ್ರಮದಲ್ಲಿ ಮಾತನಾಡಿದರು.

ಶಿವಕುಮಾರ ಸ್ವಾಮೀಜಿಗಳ ಆದರ್ಶ ಸಾರ್ವಕಾಲಿಕವಾಗಿವೆ. ಜಾತಿ, ಮತ, ಭೇದಭಾವವಿಲ್ಲದೆ ಸರ್ವಧರ್ಮ ಜಾತಿಯವರಿಗೂ ಶಿಕ್ಷಣ ನೀಡುವ ಮೂಲಕ ಅಸಂಖ್ಯಾತ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಶಿಕ್ಷಣದಿಂದ ಮಾತ್ರ ಬದುಕು ಬದಲಾಗಲು ಸಾಧ್ಯ ಎಂದು ಶ್ರೀಗಳು ನಂಬಿದ್ದರು. ಹೀಗಾಗಿಯೇ ಸಹಸ್ರಾರು ವಿದ್ಯಾರ್ಥಿಗಳಿಗೆ ಸಿದ್ಧಗಂಗಾ ಮಠದಲ್ಲಿ ಆಶ್ರಯ ನೀಡಿ, ಶಿಕ್ಷಣ ಒದಗಿಸಿದರು. ಶ್ರೀಗಳು ಅಕ್ಷರ ದಾಸೋಹದ ಜೊತೆಗೆ ಅನ್ನದಾಸೋಹ ನೀಡಿ ಸಮ ಸಮಾಜಕ್ಕೆ ನಾಂದಿ ಹಾಡಿದ್ದಾರೆ ಎಂದರಲ್ಲದೆ, ಶ್ರೀಗಳ ಆದರ್ಶಗಳು, ಸಮಾಜಮುಖಿ ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಿದ್ದಗಂಗಾಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ವರಶಂಕರ, ಉಪಾಧ್ಯಕ್ಷೆ ಪದ್ಮಾವತಿ ಕೃಷ್ಣಾರೆಡ್ಡಿ, ನಿರ್ದೇಶಕರಾದ ಚೊಕ್ಕ ಪಾಲಾಕ್ಷಿಗೌಡ, ಎಂ.ವೀರೇಶ ಸ್ವಾಮಿ, ಪಿ.ಶರಣಬಸಪ್ಪ, ಮಲ್ಲಿಕಾರ್ಜುನಗೌಡ, ಪಟ್ಟಣಶೆಟ್ಟಿ ವೀರೇಶ, ಪಿ.ಸದಾಶಿವ, ರತನ್, ಮಮತಾ ಪ್ರಶಾಂತ್, ವಿನುತ ಕರಿಬಸವರಾಜ, ಎಚ್.ಶಿಲ್ಪಾ ಬಸವರಾಜ, ಉಮಾದೇವಿ ನಾರಾಯಣಶೆಟ್ಟಿ ಸೇರಿದಂತೆ ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಿದ್ದಗಂಗಾ ಶ್ರೀಗಳ ಜನ್ಮದಿನದ ಅಂಗವಾಗಿ ಅನ್ನದಾಸೋಹ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನಿನ ಜ್ಞಾನ ಪಡೆಯುವುದು ಅರಣ್ಯವಾಸಿಯ ಮೂಲಭೂತ ಕರ್ತವ್ಯ: ರಂಜಿತಾ
ನೋಂದಾಯಿಸಿದ ಎಲ್ಲ ರೈತರ ಮೆಕ್ಕೆಜೋಳ ಖರೀದಿ: ಸೋಮಣ್ಣ ಉಪನಾಳ