ಯಲಬುರ್ಗಾ: ಸಮಾಜದ ಒಳಿತಿಗಾಗಿ ಶ್ರಮಿಸಿದ ಅಂಬಿಗರ ಚೌಡಯ್ಯ ಅವರ ಆದರ್ಶ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಪಂ ಇಒ ನೀಲಗಂಗಾ ಬಬಲಾದ ಹೇಳಿದರು.
ಹನ್ನೆರಡನೆಯ ಶತಮಾನದ ಬಸವರಾದಿ ಶರಣರಲ್ಲಿ ಅಂಬಿಗರ ಚೌಡಯ್ಯ ಪ್ರತಿಭಾವಂತ ವಚನಕಾರರಾಗಿದ್ದರು. ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕು ತಿದ್ದುವ ಕೆಲಸ ಮಾಡಿದ್ದಾರೆ.ಅವರ ವಚನಗಳಲ್ಲಿ ನಿರ್ದಾಕ್ಷಿಣ್ಯ ಮನೋಭಾವ ಮತ್ತು ಸಾಮಾಜಿಕ ಕಳಕಳಿ ಇದೆ. ಮೌಢ್ಯತೆ, ಕಂದಾಚಾರದ ವಿರುದ್ಧ ಕ್ರಾಂತಿ ನಡೆಸಿದ ಮಹಾತ್ಮರ ತತ್ವಾದರ್ಶ ಅಳವಡಿಸಿಕೊಳ್ಳುವ ಜತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ಯುವಕರು ಶರಣರ ಚಿಂತನೆ ಬದುಕಿನಲ್ಲಿ ರೂಢಿಸಿಕೊಂಡರೆ, ಜಾತ್ಯಾತೀತ ಸಮಾಜ ಮತ್ತು ಮಾನವೀಯ ಮೌಲ್ಯ ಬಿತ್ತಲು ಸಹಕಾರಿಯಾಗುತ್ತದೆ ಎಂದರು.
ಈ ಸಂದರ್ಭ ತಾಪಂ ನೌಕರರಾದ ಹಜರತ್ಅಲಿ, ಬಸವರಾಜ ಹಳ್ಳಿ, ರತ್ನಮ್ಮ, ಶರಣಪ್ಪ ಇಂಡಿ, ಸತೀಶ ಹಟ್ಟಿ, ಪ್ರಶಾಂತ ಬಡಿಗೇರ್, ಶರಣಪ್ಪ ಹಾಳಕೇರಿ, ಉಮೇಶ ಸೇರಿದಂತೆ ಮತ್ತಿತರರು ಇದ್ದರು.