ಮಹನೀಯರ ಆದರ್ಶ ಅಳವಡಿಸಿಕೊಳ್ಳಿ: ಡಾ.ಅಪ್ಪಗೆರೆ ತಿಮ್ಮರಾಜು

KannadaprabhaNewsNetwork |  
Published : Sep 01, 2026, 01:30 AM IST
ಪೋಟೋ 1 : ನೆಲಮಂಗಲ ಪಟ್ಟಣದ ಪವಾಡ ಬಸವಣ್ಣದೇವರ ಮಠದ ಶ್ರೀ ಬಸವೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಗಣ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಾನಪದ ಸಾಹಿತಿ ಡಾ.ಅಪ್ಪಗೆರೆ ತಿಮ್ಮರಾಜು ಚಾಲನೆ ನೀಡಿದರು | Kannada Prabha

ಸಾರಾಂಶ

ನೆಲಮಂಗಲ/ದಾಬಸ್‍ಪೇಟೆ: ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಯುವಶಕ್ತಿಯ ಪಾತ್ರ ಮುಖ್ಯವಾದದ್ದು, ಯುವಸಮೂಹ ಮಹನೀಯುರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಬೇಕು ಎಂದು ಜಾನಪದ ಸಾಹಿತಿ ಡಾ.ಅಪ್ಪಗೆರೆ ತಿಮ್ಮರಾಜು ತಿಳಿಸಿದರು

ನೆಲಮಂಗಲ/ದಾಬಸ್‍ಪೇಟೆ: ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಯುವಶಕ್ತಿಯ ಪಾತ್ರ ಮುಖ್ಯವಾದದ್ದು, ಯುವಸಮೂಹ ಮಹನೀಯುರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಬೇಕು ಎಂದು ಜಾನಪದ ಸಾಹಿತಿ ಡಾ.ಅಪ್ಪಗೆರೆ ತಿಮ್ಮರಾಜು ತಿಳಿಸಿದರು.

ನೆಲಮಂಗಲದ ಪವಾಡ ಬಸವಣ್ಣದೇವರ ಮಠದ ಬಸವೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಹಿತಿಗಳಾದ ವಿ.ಕೃ.ಗೋಕಾಕ್, ಎಸ್.ಎಲ್.ಬೈರಪ್ಪ, ಸ್ವಾತಂತ್ರ್ಯ ಸೇನಾನಿಗಳಾದ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ, ವಿಶ್ವ ಜನಪದ ದಿನ, ವಿಶ್ವ ಅಂಗಾಂಗ ದಾನದಿನ, ವಿಶ್ವ ಹಿರಿಯರ ದಿನ, ವಿಶ್ವ ರೇಡಿಯೋ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟುವಾಗ ಪ್ರತಿಯೊಬ್ಬರು ಸಾಮಾನ್ಯರೆ. ಕಠಿಣ ಪರಿಶ್ರಮದಿಂದ ಜೀವನದಲ್ಲಿ ಸಾಧಕರಾಗಿ ಬೆಳೆಯುತ್ತಾರೆ. ಯಾರು ಬೆವರಿನಿಂದ ಸ್ನಾನ ಮಾಡುತ್ತಾರೋ ಅಂತಹ ವ್ಯಕ್ತಿಗಳು ಸಾಧಕರಾಗುತ್ತಾರೆ. ಸಾಧನೆಗೆ ಸತತ ಪರಿಶ್ರಮದ ಅಗತ್ಯವಿದ್ದು, ಪ್ರತಿ ವಿದ್ಯಾರ್ಥಿಯೂ ಜೀವನದಲ್ಲಿ ಮಹನೀಯರನ್ನು ಆದರ್ಶವಾಗಿ ಆಯ್ದುಕೊಳ್ಳಬೇಕು ಎಂದರು.

ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಸರಿಯಾದ ಆದರ್ಶ ವ್ಯಕ್ತಿತ್ವಗಳನ್ನು ಮಾದರಿಯಾಗಿ ಇಟ್ಟುಕೊಳ್ಳುವುದು ಮುಖ್ಯ. ಸಾಧಕರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದರೆ ಉನ್ನತ ಸಾಧನೆ ಮಾಡಲು ಪ್ರೇರಣೆ ಸಿಗುತ್ತದೆ. ಕ್ರೋದ, ಮದ-ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಯುವನಟ ಮಹೇಶ್ ಸುಭಾಷ್ ನೆಟ್ರೆಕಾರ್, ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಅಧ್ಯಕ್ಷ, ಉಜ್ಜನಪ್ಪ, ಸಾಹಿತಿ ಶಶಿಕುಮಾರ್, ಹಿರಿಯ ನಾಗರೀಕರಾದ ನಾಗರಾಜು, ಕಸ್ತೂರಿ ಬೆನ್, ಮುಖ್ಯಶಿಕ್ಷಕ ಕೆಂಪಣ್ಣ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಟೋ 1 :

ನೆಲಮಂಗಲದ ಬಸವೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ವಿವಿಧ ಕ್ಷೇತ್ರದ ಗಣ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಾನಪದ ಸಾಹಿತಿ ಡಾ.ಅಪ್ಪಗೆರೆ ತಿಮ್ಮರಾಜು ಚಾಲನೆ ನೀಡಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿವ ನೀರಿನ ಸಮಸ್ಯೆ ನೀಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬಾಚೇನಹಳ್ಳಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಅಭಿವೃದ್ಧಿ ಪಡಿಸಲು ಆಗ್ರಹ