ಕುಕನೂರು: ಕಾಯಕ ತತ್ವ ಮೈಗೂಡಿಸಿಕೊಳ್ಳಬೇಕು ಎಂದು ಚಿಕೇನಕೊಪ್ಪದ ಶ್ರೀಶಿವಶಾಂತವೀರ ಶರಣರು ಹೇಳಿದರು.
ಹಾಲುಮತ ಸಮಾಜದವರು ನಿರ್ಸಗದ ಆರಾಧಕರು. ವಿಶ್ವಾಸ, ಪ್ರಾಮಾಣಿಕತೆ, ನಂಬಿಕೆ ಸಂಕೇತ ಹಾಲುಮತ ಸಮಾಜವಾಗಿದೆ. ಕನಕದಾಸರು ತಮ್ಮ ಕೃತಿಗಳಲ್ಲಿ ಹುಟ್ಟಿನಿಂದ ಬಂದ ಜಾತಿಗೆ ಮಹತ್ವಕೊಡದೆ ಮನುಷ್ಯರ ಆಚಾರ-ವಿಚಾರ ಮತ್ತು ನಡೆ-ನುಡಿಗಳಿಗೆ ಪ್ರಾಶಸ್ಯ ಕೊಡುವ ಮೂಲಕ ಎಲ್ಲರೂ ಒಂದೇ ಮನುಷ್ಯ ಜಾತಿ ಎಂದು ಸಾರಿ ಹೇಳಿದ ದಾಸರಲ್ಲಿ ಕನಕದಾಸರು ಶ್ರೇಷ್ಠರಾಗಿದ್ದಾರೆ ಎಂದರು.
ಕಾಯಕ ತತ್ವ ರೂಢಿಸಿಕೊಳ್ಳಿ: ಸಮಾಜದಲ್ಲಿನ ಅಸಮಾನತೆ,ಅಂಧಕಾರ ಮತ್ತು ಅಜ್ಞಾನ ದೂರ ಮಾಡಲು ಶ್ರಮಿಸಿದ ಶರಣರ ಕಾಯಕ ತತ್ವಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಸಂಸಾರಿಕ ಬದುಕು ಸುಗಮವಾಗಿ ಸಾಗುತ್ತದೆ ಎಂದು ಹೇಳಿದರು.ಗುತ್ತಿಗೆದಾರ ವೀರಪ್ಪ ಬಿಸನಳ್ಳಿ ಮಾತನಾಡಿ, ಹಾಲಿನಂತಿರುವ ಹಾಲುಮತ ಸಮಾಜ ಅತ್ಯಂತ ಪ್ರಾಮಾಣಿಕ, ವಿಶ್ವಾಸವುಳ್ಳ ಜನಾಂಗ. ಈ ನಾಡಿಗೆ ಹಾಲುಮತ ಸಮಾಜದವರ ನೀಡಿದ ಕೊಡುಗೆ ಅಪಾರ ಎಂದರು.
ಹಾಲುಮತ ಸಮಾಜದ ಗುರು ಶರಣಮ್ಮ ಗುರುವಿನಮಠ, ಪುರಾಣ ಪ್ರವನಕಾರ ಶಿವಕುಮಾರ, ನಾಗಯ್ಯ, ವೆಂಕಟರಡ್ಡಿ, ಕಳಕಪ್ಪ ಕಂಬಳಿ, ಶ್ರೀನಿವಾಸ ತಿಮ್ಮಾಪೂರ, ಫಿಕಾರ್ಡ ಬ್ಯಾಂಕ್ ಉಪಾಧ್ಯಕ್ಷ ಭೀಮರಡ್ಡಿ ಶ್ಯಾಡ್ಲಗೇರಿ, ಗ್ರಾಪಂ ಸದಸ್ಯರಾದ ಮಹೇಂದ್ರಕುಮಾರ ಗದಗಿನ, ಚಿದಾನಂದ ಮ್ಯಾಗಳಮನಿ, ವಿಜಯಲಕ್ಷ್ಮೀ ಮಂಗಳೂರು, ಲಲಿತಾ ಅಡಗಿಮನಿ, ಈಶಪ್ಪ ವಕ್ಕಳದ, ಶ್ರೀಕಾಂತ ಅಂಕಲಿ, ಬಸವರಾಜ ತೆಕ್ಕಲಕೋಟಿ, ಹನುಮಪ್ಪ ದೊಡ್ದಮನಿ, ಚೆನ್ನಪ್ಪ ಬಿಸನಳ್ಳಿ, ಅಶೋಕ ಅಣಗೌಡ್ರ, ಕನಕಪ್ಪ ಚಲವಾದಿ, ಕಳಕಪ್ಪ ಚಲವಾದಿ, ಬಸವರಾಜ ಚಲವಾದಿ, ಸಂಗಪ್ಪ ಅಡಗಿಮನಿ, ಬಾಳಪ್ಪ ಬಾರಕೇರ, ಮಹೇಶ ಕವಳಕೇರಿ, ಪ್ರಕಾಶ ಕಂಬಳಿ ಇತರರಿದ್ದರು.
ಭೀರಲಿಂಗೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಬದಾಮಿ ತಾಲೂಕು ಶ್ರೀ ಹಿರಿಯಮ್ಮದೇವಿ ಡೊಳ್ಳಿನ ಗಾಯನ ಸಂಘದಿಂದ ಡೊಳ್ಳಿನ ಪದಗಳ ಕಾರ್ಯಕ್ರಮ ಜರುಗಿತು. ಪತ್ರಕರ್ತ ಮಲ್ಲು ಮಾಟರಂಗಿ ಕಾರ್ಯಕ್ರಮ ಉದ್ಘಾಟಿಸಿದರು.