ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ

KannadaprabhaNewsNetwork |  
Published : Jun 27, 2025, 12:49 AM IST
26ಕೆಎಂಎನ್ ಡಿ22 | Kannada Prabha

ಸಾರಾಂಶ

ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಂವಿಧಾನದ ಕೊಲೆ ಮಾಡಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರು.

ಕನ್ನಡಪ್ರಭ ವಾರ್ತೆ ಮದ್ದೂರು

ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅವರು ದೇಶಕ್ಕೆ ಹೇರಿದ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅನ್ಯಾಯ ಎಂದು ಮನ್ಮಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಹೇಳಿದರು.

ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ದೇಶಕ್ಕೆ ಹೇರಿದ ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಕರಾಳ ದಿನ ಆಚರಣೆಯಲ್ಲಿ ಮಾತನಾಡಿದರು.

ಅಂದು ಇಂದಿರಾ ಗಾಂಧಿ ಸಂವಿಧಾನವನ್ನು ದುರ್ಬಲ ಮಾಡಿದರೆ, ಇಂದು ರಾಹುಲ್ ಗಾಂಧಿ ಅಧಿಕಾರ ಗಳಿಸುವುದಕ್ಕಾಗಿ ಸಂವಿಧಾನ ವನ್ನು ದುರ್ಬಲ ಮಾಡುತ್ತಿದ್ದಾರೆ . ಕಾಂಗ್ರೆಸ್ ಸರ್ಕಾರ ದುರಾಡಳಿತದಿಂದ ಬೇಸತ್ತ ರಾಜ್ಯದ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ. ಸಿ.ಸಿದ್ದು ಮಾತನಾಡಿ, ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಂವಿಧಾನದ ಕೊಲೆ ಮಾಡಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ನಂತರ ಜನಸಂಘದ ಕಾಲದಿಂದಲೂ ಇಂದಿನ ಬಿಜೆಪಿಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಮುಖಂಡರಾದ ಶಿವಮಲ್ಲಪ್ಪ, ಕೆ. ಕೃಷ್ಣ, ಕೆ.ಎಸ್.ಮಲ್ಲಿಕಾರ್ಜುನ್, ಎಂ.ಎಸ್. ಜಗನ್ನಾಥ್ ಅವರನ್ನು ಅಭಿನಂದಿಸಲಾಯಿತು.

ಈ ವೇಳೆ ತಾಲೂಕು ಮೋರ್ಚಾ ಅಧ್ಯಕ್ಷ ಸಿ.ಕೆ.ಸತೀಶ್, ರೈತ ಮೋರ್ಚಾ ಅಧ್ಯಕ್ಷ ಬಿ. ಎಚ್. ರವಿ, ಯುವ ಮೋರ್ಚಾ ಅಧ್ಯಕ್ಷ ಸಿ.ಡಿ.ಸಂತೋಷ್, ಮಹಿಳಾ ಮೋರ್ಚಾ ಅಧ್ಯಕ್ಷ ಶ್ವೇತ, ಮುಖಂಡರಾದ ವಾಸು, ಎಂ.ಎಸ್. ವೀರಭದ್ರ ಸ್ವಾಮಿ, ರಂಜಿತಾ, ಸೌಮ್ಯ ಶ್ರೀನಿವಾಸ್, ಕಾಂತಾಮಣಿ, ಮಾ.ನ ಪ್ರಸನ್ನ ಕುಮಾರ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ