ಗಂಗಾವತಿ: ನಗರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತರಕ್ಷಣೆಯೇ ನನ್ನ ಆದ್ಯತೆಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 60:40ರ ಅನುಪಾತ ಹಾಗೂ ಎನ್ಜಿಟಿ ನಿಧಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, 8 ತಿಂಗಳ ಒಳಗಾಗಿ ಯೋಜನೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ನಗರದ ಭದ್ರತೆ ಬಲಪಡಿಸಲು ಕೆಕೆಆರ್ಡಿಬಿ ಅನುದಾನದ ₹2 ಕೋಟಿ ವೆಚ್ಚದಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳು ಹಾಗೂ ವಿಡಿಯೋ ವಾಲ್, ಸರ್ವರ್ ವ್ಯವಸ್ಥೆಯನ್ನು ಉದ್ಘಾಟಿಸಲಾಗಿದೆ ಎಂದರು.ಬೀದರ್ ಮತ್ತು ಮೈಸೂರು ನಗರಗಳ ಆನಂತರ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಈ ಸುಧಾರಿತ ಎಐ ಸುರಕ್ಷತಾ ವ್ಯವಸ್ಥೆ ಅಳವಡಿಸಿಕೊಂಡ ಕರ್ನಾಟಕದ ಪ್ರಥಮ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಗಂಗಾವತಿ ಪಾತ್ರವಾಗಿದೆ. ಈ ತಂತ್ರಜ್ಞಾನವು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೂರಕವಾಗಿದ್ದು, ಅಪರಾಧಮುಕ್ತ ಹಾಗೂ ಸುರಕ್ಷಿತ ಗಂಗಾವತಿ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದೆ ಎಂದರು.