ಅಂಬೇಡ್ಕರ್ ಆಶಯದಂತೆ ಶಿಕ್ಷಣಕ್ಕೆ ಒತ್ತು

KannadaprabhaNewsNetwork |  
Published : Apr 15, 2026, 01:15 AM IST
14ಕೆಆರ್ ಎಂನ್ 2.ಜೆಪಿಜಿರಾಮನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಶಾಸಕ ಇಕ್ಬಾಲ್ ಹುಸೇನ್ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಮನಗರ: ಯಾವುದೇ ವ್ಯಕ್ತಿ ಎತ್ತರಕ್ಕೆ ಏರಲು ಆತನ ಹಿನ್ನೆಲೆ ಆಸ್ತಿ, ಜಾತಿ, ಕುಟುಂಬ ಇತ್ಯಾದಿ ಕಾರಣಗಳಿಂದ ಗಟ್ಟಿಯಾಗಿರಬೇಕು. ಆದರೆ, ಅಂಬೇಡ್ಕರ್ ಅದ್ಯಾವುದು ಇಲ್ಲದೆ ಅಕ್ಷರದ ಕಾರಣದಿಂದಲೇ ಬಹು ಎತ್ತರಕ್ಕೆ ಬೆಳೆದು ಗೌರವ ಪಡೆದುಕೊಂಡರು. ಆದ್ದರಿಂದ ಪ್ರತಿ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಸಮಾಜದ ಸಂಪತ್ತನ್ನಾಗಿ ಮಾಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು

ರಾಮನಗರ: ಯಾವುದೇ ವ್ಯಕ್ತಿ ಎತ್ತರಕ್ಕೆ ಏರಲು ಆತನ ಹಿನ್ನೆಲೆ ಆಸ್ತಿ, ಜಾತಿ, ಕುಟುಂಬ ಇತ್ಯಾದಿ ಕಾರಣಗಳಿಂದ ಗಟ್ಟಿಯಾಗಿರಬೇಕು. ಆದರೆ, ಅಂಬೇಡ್ಕರ್ ಅದ್ಯಾವುದು ಇಲ್ಲದೆ ಅಕ್ಷರದ ಕಾರಣದಿಂದಲೇ ಬಹು ಎತ್ತರಕ್ಕೆ ಬೆಳೆದು ಗೌರವ ಪಡೆದುಕೊಂಡರು. ಆದ್ದರಿಂದ ಪ್ರತಿ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಸಮಾಜದ ಸಂಪತ್ತನ್ನಾಗಿ ಮಾಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ಜ್ಞಾನವೇ ಶಕ್ತಿ ಎಂಬ ಡಾ. ಅಂಬೇಡ್ಕರ್ ಆಶಯದಂತೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿದ್ದು, ಎಲ್ಲಾ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಿ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದೆ. ಡಾ. ಅಂಬೇಡ್ಕರ್ ಪ್ರಮುಖರು. ಅವಕಾಶ ವಂಚಿತ ಸಮಾಜದಲ್ಲಿ ಜನಿಸಿ ತಮ್ಮ ಸ್ವಪ್ರತಿಭೆ ಮೂಲಕ ಎತ್ತರಕ್ಕೆ ಏರಲು ಶಿಕ್ಷಣವೇ ಕಾರಣ. ಶಿಕ್ಷಣ -ಸಂಘಟನೆ -ಹೋರಾಟ ಎಂಬ ಮಂತ್ರವನ್ನು ಜಪಿಸಿದ ಅಂಬೇಡ್ಕರ್ ನಮ್ಮೆಲ್ಲರಿಗೂ ಮಾರ್ಗದರ್ಶಕರು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಡಾ.ಅಂಬೇಡ್ಕರ್ ಅವರು ಓದಿ ಜ್ಞಾನ ಸಂಪಾದಿಸು, ಜ್ಞಾನವಿದ್ದರೆ ಜಗತ್ತು ನಿನಗೆ ಹೆದರುತ್ತೆ ಎಂದಿದ್ದರು. ಅಂಬೇಡ್ಕರ್ ಕೋಟ್ಯಂತರ ಜನರಿಗೆ ದಾರಿ ದೀಪ, ಮಾರ್ಗದರ್ಶಕರಾಗಿದ್ದಾರೆ. ಇಂದಿನ ಸಮಾನತೆಯ ಭಾರತ ಕಾಣಲು ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಸಮಾಜದ ಕಟ್ಟಕಡೆಯ ವ್ಯಕ್ತಿ ಮೊಟ್ಟ ಮೊದಲಾದರೆ ನಾವು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು.

ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ:

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬೆಳ್ಳಿ ರಥದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಆವರಣದಿಂದ ಪ್ರಾರಂಭವಾಗಿ ಡಾ. ಅಂಬೇಡ್ಕರ್ ಭವನದವರೆಗೂ ಸಾಗಿತು.

14ಕೆಆರ್ ಎಂನ್ 2.ಜೆಪಿಜಿ

ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಶಾಸಕ ಇಕ್ಬಾಲ್ ಹುಸೇನ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ: ಪೂರ್ವಭಾವಿ ಸಭೆ
ಸಮಾನತೆಗಾಗಿ ಬದುಕು ಸವೆಸಿದ ಶ್ರೀಗಂಧ ಅಂಬೇಡ್ಕರ್