ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅಗತ್ಯ: ಎನ್. ಮಂಜುನಾಥ್

KannadaprabhaNewsNetwork |  
Published : Jun 26, 2025, 01:32 AM IST
ಪೋಟೋ: 25ಎಸ್‌ಎಂಜಿಕೆಪಿ03ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ವತಿಯಿಂದ ಬುಧವಾರ ಪತ್ರಿಕಾಭವನದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಪತ್ರಕರ್ತರಿಗೆ ಕಣ್ಣಿನ ತಪಾಸಣಾ ಶಿಬಿರ ನಡೆಯಿತು | Kannada Prabha

ಸಾರಾಂಶ

ಪತ್ರಕರ್ತರ ಕಣ್ಣಿನ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಶಿಬಿರ ಸಹಕಾರಿ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು.

ಶಿವಮೊಗ್ಗ: ಪತ್ರಕರ್ತರ ಕಣ್ಣಿನ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಶಿಬಿರ ಸಹಕಾರಿ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ವತಿಯಿಂದ ಬುಧವಾರ ಪತ್ರಿಕಾಭವನದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ನಮ್ಮ ಸಹೋದ್ಯೋಗಿಗಳು, ನಮ್ಮ ಪತ್ರಕರ್ತರು, ಕಚೇರಿ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ಸದಸ್ಯರು ಕಣ್ಣುಗಳನ್ನು ಜೋಪಾನವಾಗಿ ಕಾಪಾಡಿಕೊಳ್ಳಲು ಶಿಬಿರ ಸಹಕಾರಿಯಾಗಿದೆ ಎಂದರು.ಪ್ರತಿದಿನ ನಿರಂತರ ಮೊಬೈಲ್ ಹಾಗೂ ಕಂಪ್ಯೂಟರ್ ಬಳಕೆಯಿಂದಾಗಿ, ಕಣ್ಣುಗಳಿಗೆ ಅಲ್ಪ ಮಟ್ಟಿಗೆ ಹಾನಿಯಾಗಿರುತ್ತದೆ. ಇದು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಶಿಬಿರ ಅಗತ್ಯವಾಗಿದೆ ಎಂದು ಹೇಳಿದರು. ಹುಟ್ಟಿನಿಂದಲೇ ಕೆಲವರು, ದೃಷ್ಟಿಯನ್ನು ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯವನ್ನು ಕಳೆದುಕೊಂಡಿರುತ್ತಾರೆ. ಆದರೆ, ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯತನದಿಂದ ಕಂಣ್ಣು ಕಳೆದುಕೊಂಡವರಿದ್ದಾರೆ. ಹೀಗಾಗಿ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯಕ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪರ್ತಕರ್ತರಾದ ಹೊನ್ನಾಳಿ ಚಂದ್ರಶೇಖರ್, ಸ್ಪಂದನ ಚಂದ್ರು, ಜಿ.ಪದ್ಮನಾಭ್, ಸಂತೋಷ್ ಕಾಚಿನಕಟ್ಟೆ, ಗಜೇಂದ್ರಸ್ವಾಮಿ, ಕಿರಣ್ ಕಂಕಾರಿ, ಪ್ರಸನ್ನ, ಪ್ರಸಾದ್ ನೇತ್ರಾಲಯದ ವೈದ್ಯ ಡಾ.ವಿಷ್ಣು, ವಿನಯ್, ಹರೀಶ್, ಪುಷ್ಪಾವತಿ, ಅನು ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ