ದೊಡ್ಡಬಳ್ಳಾಪುರ: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಸ್ಥಳೀಯ ಪ್ರದೇಶಾಭಿವೃದ್ದಿ ಹಾಗೂ ವ್ಯವಸ್ಥಿತ ಬಡಾವಣೆಗಳ ನಿರ್ಮಾಣ ಕಾರ್ಯಕ್ಕೆ ಒತ್ತಾಸೆಯಾಗಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ನಗರಗಳು ಅಡ್ಡಾದಿಟ್ಟಿಯಾಗಿ ಬೆಳೆಯುತ್ತಿದ್ದುದನ್ನು ಮನಗಂಡ ಸರ್ಕಾರ ನಗರ ಯೋಜನಾ ಪ್ರಾಧಿಕಾರಗಳನ್ನ ಅಸ್ತಿತ್ವಕ್ಕೆ ತಂದಿದೆ. ಪ್ರಾಧಿಕಾರದ ಪ್ರಕಾರ ನಗರಗಳು ವಿಶಾಲವಾದ ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಒಳಗೊಂಡಿರಬೇಕು. ಕಾನೂನು ಪ್ರಕಾರವಾಗಿ ಸದಸ್ಯರು ಸೇರಿದಂತೆ ನಾನು ಆಡಳಿತ ನಡೆಸುವ ಮೂಲಕ ಜನರ ಕೆಲಸ ಮಾಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪದ ಬದ್ದತೆ ಇದೆ. ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದಲ್ಲಿ ಹೆಸರಘಟ್ಟ, ತೂಬಗೆರೆ ಸೇರಿದಂತೆ ತಾಲೂಕಿನ ಹೋಬಳಿಗಳಿದ್ದು, ಪ್ರತಿಯೊಬ್ಬರಿಗೆ ಒಂದೊಂದು ಬಾರಿ ಅವಕಾಶ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ತಮ್ಮ ಅಧಿಕಾರಾವಧಿಯಲ್ಲಿ ಜನಸ್ನೇಹಿಯಾಗಿ ಕೆಲಸ ಮಾಡಲಾಗುವುದು. ಬಡವರು, ಕೂಲಿಕಾರರ ಪರವಾಗಿ ಕೆಲಸ ಮಾಡುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅವಕಾಶಗಳು ಪಕ್ಷದ ಕಾರ್ಯಕರ್ತರಿಗೆ ದೊರೆಯಲಿದೆ. ಅವಕಾಶ ದೊರೆತಾಗ ಜನಪರವಾಗಿ ಕೆಲಸ ಮಾಡುವುದು ಅಗತ್ಯ. ಹಾಗಾದಾಗ ಮಾತ್ರ ಮುಂದಿನ ದಿನಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯ ಎಂಬುದನ್ನು ಕಾರ್ಯಕರ್ತರ ಅರ್ಥ ಮಾಡಿಕೊಳ್ಳಬೇಕು ಎಂದರು.ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ:
ಕಾರ್ಯಕ್ರಮದಲ್ಲಿ ಬೆಂ.ಗ್ರಾ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಮಂಜುನಾಥ ಅದ್ದೆ, ನಗರಸಭೆ ಮಾಜಿ ಅಧ್ಯಕ್ಷ ಜೆ.ರಾಜೇಂದ್ರ, ಮಾಜಿ ಉಪಾಧ್ಯಕ್ಷ ಸೋಮರುದ್ರಶರ್ಮ, ಎಸ್.ದಯಾನಂದ್, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರೇವತಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಗೋವಿಂದರಾಜು, ಮುಖಂಡರಾದ ರವಿಸಿದ್ದಪ್ಪ, ವಿಶ್ವನಾಥರೆಡ್ಡಿ, ಚಿದಾನಂದ್, ಸಿದ್ದರಾಮಣ್ಣ, ರಾಜಗೋಪಾಲ್, ಕೆ.ಎಸ್.ರವಿಕುಮಾರ್, ಆಂಜನಪ್ಪ, ನಾಗವೇಣಿ, ಮಮತ, ಶೋಭಾ, ತಾಪಂ ಮಾಜಿ ಅಧ್ಯಕ್ಷ ನಾಗರಾಜ್, ನಾರಾಯಣಗೌಡ ಇತರರು ಉಪಸ್ಥಿತರಿದ್ದರು.