ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗಳನ್ನು ಡಿಜಿಟಲೀಕರಣಗೊಳಿಸಿ ಕ್ಲಸ್ಟರ್ ಮಟ್ಟದಲ್ಲಿ ಮಲ್ಟಿಮೀಡಿಯಾ ಸೆಂಟರ್ ಸ್ಥಾಪಿಸಿ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಕ್ರಮ ವಹಿಸಲಾಗುವುದು. ಅತಿಥಿ ಶಿಕ್ಷಕರ ನೇಮಕಾತಿ ಮಾಡಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದರು.ಸೌಲಭ್ಯಗಳನ್ನು ಬಳಸಿಕೊಂಡು ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಕೊಡುಗೆ ನೀಡಬೇಕು. ಹಿಂದುಳಿದ ವರ್ಗದವರಿಗೆ ಮೊದಲ ಬಾರಿಗೆ ಶಿಕ್ಷಣ ನೀಡಿದ್ದ ತಲಕಾಡು ರಂಗೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡುವಂತೆ ಸಲಹೆ ನೀಡಿದ ಅವರು, ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳ ರೂಪಿಸಿ ದೇಶದ ಉತ್ತಮ ಭವಿಷ್ಯ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಸಾಕಷ್ಟಿದೆ ಎಂದು ಬಣ್ಣಿಸಿದರು.
ಕೊಳ್ಳೇಗಾಲ ಜೀತವನ ಬುದ್ಧ ವಿಹಾರದ ಮನೋ ರಕ್ಕಿತ ಬಂತೇಜಿ ಮಾತನಾಡಿ, ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಮೂಲಕ ದೇಶದ ಭವಿಷ್ಯ ನಾಯಕರನ್ನು ಸೃಷ್ಟಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರ ವೃತ್ತಿ ಪವಿತ್ರ. ಪಠ್ಯ ಪುಸ್ತಕದ ವಿಷಯಗಳನ್ನು ಕಲಿಸುವುದರ ಜೊತೆಗೆ ಮಾನವೀಯ ಮೌಲ್ಯದ ಶಿಕ್ಷಣವನ್ನು ನೀಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎ.ಲೋಕೇಶ್, ಡಯಟ್(ಅಭಿವೃದ್ಧಿ) ಉಪನಿರ್ದೇಶಕ ಕೆ.ಯೋಗೇಶ್, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಸದಸ್ಯ ನೂರುಲ್ಲಾ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಪ್ರಮುಖರಾದ ಪಿ.ಮಾದೇಶ್, ಎಚ್.ನಾಗೇಶ್, ಟಿ.ಸಿ.ಚೌಡಯ್ಯ, ಮಲ್ಲಿಕಾರ್ಜುನಯ್ಯ, ಡಾ.ಚಂದ್ರಶೇಖರ್ ದಡದಪುರ, ರಾಮಲಿಂಗಯ್ಯ, ಶಿವಕುಮಾರ್, ಸಿದ್ದೇಗೌಡ, ಪುಟ್ಟರಾಜಯ್ಯ, ಪುಟ್ಟಸ್ವಾಮಿ, ಚಂದ್ರಶೇಖರ್, ರವೀಂದ್ರ, ನಾಗರಾಜು, ನಿಂಗರಾಜು, ಉದಯ್ ಕುಮಾರ್, ಗುರುಸ್ವಾಮಿ, ಮಹೇಶ್ ಪಾಲ್ಗೊಂಡಿದ್ದರು.