ಮುಳಬಾಗಿಲು ತಾಲೂಕು ಅಭಿವೃದ್ಧಿಗೆ ಒತ್ತು

KannadaprabhaNewsNetwork |  
Published : Sep 04, 2025, 01:00 AM IST
೩ಕೆಎಲ್‌ಆರ್-೯ಕೋಲಾರದ ಜಿಲ್ಲಾಧಿಕಾರಿ ಕೇಸ್ವಾನ್ ಸಭಾಂಗಣದಲ್ಲಿ ಕಂಪಣ ನಾಗರೀಕ ವೇದಿಕೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಮುಳಬಾಗಿಲು ತಾಲೂಕಿನ ವಿವಿಧ ಭಾಗಗಳಲ್ಲಿ ಸುಸರ್ಜಿತ ಹಾಗೂ ನಿರ್ಮಲ ಆಸ್ಪತ್ರೆಗಳ ನಿರ್ಮಾಣವಾಗಬೇಕಾಗಿದೆ, ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಮುಳಬಾಗಿಲು ಎ.ಪಿ.ಎಂ.ಸಿ ಮಾರುಕಟ್ಟೆ ಒತ್ತುವರಿಯಾಗುತ್ತಿದ್ದು, ಆವರಣವು ಸರ್ವೇ ನಡೆಸಿ ಕಾಂಪೌಡ್ ನಿರ್ಮಿಸಲಾಗುವುದು.

ಕನ್ನಡಪ್ರಭ ವಾರ್ತೆ ಕೋಲಾರಮುಳಬಾಗಿಲು ತಾಲೂಕಿನ ಐತಿಹಾಸಿಕ ದೇವಾಲಯಗಳು, ರಸ್ತೆ ಮಾರ್ಗಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂಪಣ ನಾಗರೀಕ ವೇದಿಕೆ ಸಭೆಯಲ್ಲಿ ಅವರು ಮಾತನಾಡಿ, ಮುಳಬಾಗಿಲು ತಾಲೂಕಿನ ೮ ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿಪಡಿಸಲು ವೇದಿಕೆಯ ಸದಸ್ಯರು ಕೋರಿದ್ದಾರೆ. ಈ ಬಗ್ಗೆ ಚರ್ಚಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ

ತಾಲೂಕಿನ ವಿವಿಧ ಭಾಗಗಳಲ್ಲಿ ಸುಸರ್ಜಿತ ಹಾಗೂ ನಿರ್ಮಲ ಆಸ್ಪತ್ರೆಗಳ ನಿರ್ಮಾಣವಾಗಬೇಕಾಗಿದೆ, ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಮುಳಬಾಗಿಲು ಎ.ಪಿ.ಎಂ.ಸಿ ಮಾರುಕಟ್ಟೆ ಒತ್ತುವರಿಯಾಗುತ್ತಿದ್ದು, ಆವರಣವು ಸರ್ವೇ ನಡೆಸಿ ಕಾಂಪೌಡ್ ನಿರ್ಮಿಸಲು ಸೂಚಿಸಿದರು.

ಕಸಾಯಿಖಾನೆಗಳಿಗೆ ಎಚ್ಚರಿಕೆ

ಕಸಾಯಿಖಾನೆ ತ್ಯಾಜ್ಯವನ್ನು ನಗರದ ವಿವಿಧ ಭಾಗಗಳಲ್ಲಿ ಚೀಲಗಳಿಗೆ ತುಂಬಿಸಿ ಎಸೆಯುತ್ತಾರೆ. ಆದ್ದರಿಂದ ನಗರಸಭೆಯ ಅಧಿಕಾರಿಗಳು ಕಸಾಯಿಖಾನೆಗಳ ವಿರುದ್ಧ ದೂರನ್ನು ದಾಖಲಿಸಿ ಅವರ ಪರವಾನಿಗೆ ರದ್ದು ಪಡಿಸಲು ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ನಗರಸಭೆಯವರು ಅರಿವು ಮೂಡಿಸಲು ಸೂಚಿಸಿದರು.

ಕೋಲಾರ ಎಸ್.ಪಿ ಡಾ.ಬಿ.ನಿಖಿಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕಿ ಅಂಬಿಕಾ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ತಹಸೀಲ್ದಾರ್ ಗೀತಾ, ಕಂಪಣ ನಾಗರೀಕ ವೇದಿಕೆಯ ಸದಸ್ಯರಾದ ರಾಮ ಕೃಷ್ಣಪ್ಪ, ಜಯರಾಂ, ನಿರಂಜನ್, ಕುಮಾರ್ ಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ವರ್ಷದಲ್ಲಿ ಭಾರತದ ಅಭಿವೃದ್ಧಿ : ಶ್ರೀ ಶ್ರೀ
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ