ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಸೋಮವಾರ ರಜತಾದ್ರಿಯ ಅಟಲ್ ಬಿಹಾರಿ ಸಭಾಂಗಣದಲ್ಲಿ ಮತದಾನ ಕೇಂದ್ರಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಆಯೋಗವು ಚುನಾವಣೆಯು ನ್ಯಾಯ ಸಮ್ಮತವಾಗಿ ನಡೆಸಬೇಕೆಂಬ ಧ್ಯೇಯವನ್ನು ಹೊಂದಿದೆ. ಮತದಾನದ ದಿನದಂದು ಮತ ಕೇಂದ್ರಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ವೀಕ್ಷಿಸಿ ವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆಗಳು ನಡೆಯುವಂತೆ ನೋಡಿಕೊಳ್ಳಲು ಮೈಕ್ರೋ ಅಬ್ಸರ್ವರ್ಗಳಾಗಿ ನಿಮ್ಮನ್ನು ನೇಮಕ ಮಾಡಲಾಗಿದ್ದು, ಚುನಾವಣಾ ಆಯೋಗವು ನೀಡಿರುವ ನಿರ್ದೇಶನ ಹಾಗೂ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಜವಾಬ್ದಾರಿಯುತವಾಗಿ ತಾವು ನಿರ್ವಹಿಸಬೇಕು ಎಂದರು.ಪ್ರತಿಯೊಬ್ಬರೂ ಮಾಡುವ ಮತದಾನವನ್ನು ಗೌಪ್ಯವಾಗಿರುವಂತೆ ನೋಡಿಕೊಳ್ಳಬೇಕು. ಮತದಾನ ಕೇಂದ್ರಕ್ಕೆ ಅಧಿಕಾರಿಗಳು ಬಂದ ಸಮಯ, ಮತದಾನ ಪ್ರಾರಂಭಕ್ಕೂ ಮುನ್ನ ಮಾರ್ಕ್ ಪೋಲ್ ಮಾಡಿರುವ ಬಗ್ಗೆ ಮತದಾನ ಪ್ರಾರಂಭಿಸಿರುವ ಸಮಯ, ಮುಕ್ತವಾದ ಸಮಯಗಳ ಬಗ್ಗೆ ವರದಿ ನೀಡಬೇಕೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮತದಾನ ಕೇಂದ್ರಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.