ಕನ್ನಡಪ್ರಭ ವಾರ್ತೆ ಅರಕಲಗೂಡು
ಪಟ್ಟಣದ ಕೊತ್ತಲು ಗಣಪತಿ ಉದ್ಯಾನದಲ್ಲಿ ಶನಿವಾರ ನಡೆದ ನೌಕರರ ದಸರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಉತ್ಸವದ 7 ದಿನಗಳು ವಿವಿಧ ಇಲಾಖೆಗಳ ಮೂಲಕ ವಿವಿಧ ದಸರಾವನ್ನು ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದೆ. ನೌಕರರಿಗಾಗಿಯೇ ದಸರಾ ಆಯೋಜಿಸಿದ್ದರೂ ಸರ್ಕಾರಿ ನೌಕರರು ಪಾಲ್ಗೊಳ್ಳದಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ನೌಕರರ ಸಂಘ ಎಚ್ಚರ ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ನೌಕರರ ಮೇಲೆ ಹೆಚ್ಚುತ್ತಿರುವ ಒತ್ತಡ ಅವರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಅಗತ್ಯಕ್ಕೆ ತಕ್ಕ ಪ್ರಮಾಣದಲ್ಲಿ ಸರ್ಕಾರಿ ನೌಕರರ ನೇಮಕಾತಿಯಾಗಿಲ್ಲ. ಇರುವ ನೌಕರರು ಎಲ್ಲ ಕೆಲಸಗಳನ್ನು ನಿಭಾಯಿಸ ಬೇಕಿರುವ ಕಾರಣ ಒತ್ತಡ ಹೆಚ್ಚಾಗುತ್ತಿದೆ. ಈ ಕುರಿತು ಸರ್ಕಾರ ಗಮನ ಹರಿಸಬೇಕು ಎಂದರು.ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಪಿ.ಶಿವಶಂಕರ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಶಿವಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ಸಮಾಜ ಸೇವಕ ಗಾಂದಿನಗರ ದಿವಾಕರ್, ದಸರಾ ಉತ್ಸವ ಸಮಿತಿ ಕಾರ್ಯದರ್ಶಿ ಎಸ್. ವೈ. ರವಿಕುಮಾರ್ ಮಾತನಾಡಿದರು.