ಕನ್ನಡಪ್ರಭ ವಾರ್ತೆ ಮೈಸೂರು
ಸಿಬ್ಬಂದಿ ವರ್ಗಾವಣೆ, ಪದನಾಮ ಬದಲಾವಣೆ, ಪದೋನ್ನತಿ ಇನ್ನಿತರ ವಿಚಾರಗಳಿಗೆ ಲಂಚದ ಬೇಡಿಕೆ ಹಿನ್ನೆಲೆಯಲ್ಲಿ ಕುಲಸಚಿವರ ಕಚೇರಿ ಮುಂಭಾಗದಲ್ಲಿ ನೋಟಿನ ತೋರಣ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ನೌಕರರು ಮತ್ತು ಕುಲಸಚಿವರ ಕಚೇರಿ ಸಿಬ್ಬಂದಿ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಮುಕ್ತ ವಿವಿ ಆಡಳಿತ ಮಂಡಳಿ ಕೈಗೊಂಡಿರುವ ಕೆಲವೊಂದು ಕ್ರಮ, ನಿರ್ಣಯಗಳಿಂದ ವಿಶ್ವವಿದ್ಯಾನಿಲಯ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾರಕವಾಗಿದೆ. ವಿವಿಗೆ ಮಂಜೂರಾಗಿರುವ ಬೋಧಕ ಮತ್ತು ಬೋಧಕೇತರರ ಹುದ್ದೆಗಳಿಗಿಂತಲೂ ಹೆಚ್ಚು ಹಾಗೂ ನಿಯಮ ಉಲ್ಲಂಘಿಸಿ ತಾತ್ಕಾಲಿಕವಾಗಿ ಸಿಬ್ಬಂದಿ ನೇಮಿಸಿಕೊಂಡಿದ್ದು, ಈ ನೇಮಕಾತಿಯನ್ನು ಕೂಡಲೇ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.ವಿವಿ ಪ್ರಾದೇಶಿಕ, ಜಿಲ್ಲಾ ಕೇಂದ್ರಗಳ ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸುವುದು ಹಾಗೂ ಹಾಲಿ ತಾಲೂಕು, ಗ್ರಾಮಗಳ ಮಟ್ಟದಲ್ಲಿ ಪ್ರಾರಂಭಿಸಿರುವ ಪ್ರಾದೇಶಿಕ ಕೇಂದ್ರಗಳನ್ನು ಮುಚ್ಚಲು ಕ್ರಮ ವಹಿಸಬೇಕು. ಕೆಲವು ವರ್ಷಗಳಿಂದ ವಿವಿ ಎಲ್ಲಾ ವರ್ಗದ ಸಿಬ್ಬಂದಿಗೆ ಆರ್ಥಿಕ ಅಭದ್ರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳ ಜಮಾ ಖರ್ಚಿನ ಅಂಕಿ ಅಂಶಗಳನ್ನು ಬ್ಯಾಂಕಿನ ಹೆಸರಿನೊಂದಿಗೆ ಒದಗಿಸಿ ಹಾಗೂ ವಿವಿಯ ವೇತನ ಮತ್ತು ಪಿಂಚಣಿಗೆ ವಿವಿಧ ಬ್ಯಾಂಕ್ ಗಳಲ್ಲಿ ಠೇವಣಿ ಇಟ್ಟಿರುವ ಹಣದ ಮಾಹಿತಿಯನ್ನು ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಎಸ್.ಎನ್. ಸತೀಶ್, ಪದಾಧಿಕಾರಿಗಳಾದ ನಾಗೇಂದ್ರ, ಎನ್. ಪ್ರದೀಪ್ ಗಿರಿ, ಟಿ. ರವೀಂದ್ರ, ಗೀತಾ, ಸಿ.ಎಂ. ಕೃಷ್ಣೇಗೌಡ, ಬಸವರಾಜು, ಎಚ್.ಎಂ. ನಾಗರಾಜಮೂರ್ತಿ ಮೊದಲಾದವರು ಇದ್ದರು.