ಗೃಹಜ್ಯೋತಿ ಯಶಸ್ವಿಗೆ ನೌಕರರ ಪಾತ್ರ ಪ್ರಮುಖ

KannadaprabhaNewsNetwork |  
Published : Jan 29, 2026, 02:45 AM IST
ಪೋಟೊ27ಕೆಎಸಟಿ4: ಕುಷ್ಟಗಿ ಪಟ್ಟಣದ ಜೆಸ್ಕಾಂ ಕಛೇರಿ ಆವರಣದಲ್ಲಿ ನಡೆದ ಕ್ರೀಡಾಕೂಟದ ಪ್ರಶಸ್ತಿ ಪ್ರಧಾನ, ಸನ್ಮಾನ ಕಾರ್ಯಕ್ರಮದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ ದೋಟಿಹಾಳ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯುತ್‌ ಇಲಾಖೆ ನೌಕರರು ಜೀವದ ಹಂಗು ತೊರೆದು ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರು ಇವರಿಗೆ ಗೌರವ ಕೊಡುವದರ ಜತೆಗೆ ಇವರ ಕಾರ್ಯ ಪ್ರಶಂಸಿಸಬೇಕು

ಕುಷ್ಟಗಿ: ಸಾರ್ವಜನಿಕರ ಮನೆಯಲ್ಲಿ ಬೆಳಕಾಗಲು ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿರುವ ವಿದ್ಯುತ್‌ ಇಲಾಖೆಯ ನೌಕರರ ಕಾರ್ಯ ಶ್ಲಾಘನೀಯ ಎಂದು ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ್‌ ದೋಟಿಹಾಳ ಹೇಳಿದರು.

ಪಟ್ಟಣದ ಜೆಸ್ಕಾಂ ಕಚೇರಿಯ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರಮಾಣ ಪತ್ರ, ಇಲಾಖೆಯಲ್ಲಿ ಉತ್ತಮ ಸೇವೆಗೈದ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯುತ್‌ ಇಲಾಖೆ ನೌಕರರು ಜೀವದ ಹಂಗು ತೊರೆದು ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರು ಇವರಿಗೆ ಗೌರವ ಕೊಡುವದರ ಜತೆಗೆ ಇವರ ಕಾರ್ಯ ಪ್ರಶಂಸಿಸಬೇಕು ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನದಲ್ಲಿ ವಿದ್ಯುತ್ ಇಲಾಖೆ ಅಧಿಕಾರಿಗಳು ಉತ್ತಮ ಕಾರ್ಯ ಮಾಡಿದ್ದರಿಂದ ಗ್ಯಾರಂಟಿ ಯೋಜನೆ ಗೃಹ ಜ್ಯೋತಿ ಯೋಜನೆ ‌ಯಶಸ್ವಿಯಾಗಿದೆ ಎಂದು ಹೇಳಿದರು.

ಕೊಪ್ಪಳ ವಿವಿ ಕುಲಪತಿ ಡಾ.ಎಸ್‌.ವಿ.ಡಾಣಿ ಮಾತನಾಡಿ, ಜಾತಿ ಧರ್ಮ ಎಂಬ ಬೇಧಭಾವವಿಲ್ಲದೆ ಎಲ್ಲರೂ ವಿದ್ಯುತ್‌ ಬಳಕೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬರ ಮನೆಯ ನಂದಾದೀಪದಂತೆ ಹಗಲು ರಾತ್ರಿಯನ್ನದೆ ಮಳೆ ಚಳಿಯನ್ನದೆ ವಿದ್ಯುತ್‌ ನೌಕರರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮಾಜಿ ಶಾಸಕ ಕೆ ಶರಣಪ್ಪ, ಯುವ ಮುಖಂಡ ದೊಡ್ಡಬಸವನಗೌಡ ಬಯ್ಯಾಪೂರ ಸೇರಿದಂತೆ ಅನೇಕರು ಮಾತನಾಡಿದರು. ಶಿಕ್ಷಕ ಜೀವನಸಾಬ ಬಿನ್ನಾಳ ಜಾನಪದ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು, ಅಂಕಲಿಮಠದ ಶ್ರೀಗಳು ಆಶೀರ್ವಚನ ನೀಡಿದರು. ಕ್ರೀಡಾಕೂಟದಲ್ಲಿ ವಿಜೇತರಾದ ನೌಕರರಿಗೆ ಪ್ರಶಸ್ತಿ ವಿತರಿಸಲಾಯಿತು,

ಉತ್ತಮ ಸೇವೆಗೈದ ನೌಕರರಿಗೆ ಸನ್ಮಾನಿಸಿ ಗೌರವಿಸಲಾಯಿತು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ಮಕ್ಕಳನ್ನು ಗೌರವಿಸಲಾಯಿತು.

ಈ ಸಮಾರಂಭದಲ್ಲಿ ಜೆಸ್ಕಾಂ ಇಲಾಖೆಯ ನೌಕರರಾದ ಜ್ಯೋತಿ, ಜಂಬುನಾಥ, ಶಿವರುದ್ರಪ್ಪ, ಎಂ.ಎಂ. ಮುರಗೋಡ್, ಶರಣಬಸಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಮಲ್ಲಪ್ಪ. ಬಂಕದಮನಿ, ಮರಿಗೌಡ ಗೌಡರ, ಬಸವರಾಜ ಸಂಗಮೇಶ ಹಿರೇಮಠ, ಕರಿಬಸಮ್ಮ ಪಟ್ಟಣಶೆಟ್ಟಿ, ಭೂಮೇಶ, ವಿದ್ಯುತ್ ಗುತ್ತಿಗೆದಾರರು, ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ