ಶಿಕ್ಷಣದಿಂದಲೇ ಭೋವಿ ಸಮಾಜದ ಸಬಲೀಕರಣ ಸಾಧ್ಯ: ಉಮಾಶಂಕರ್

KannadaprabhaNewsNetwork |  
Published : Jul 03, 2026, 01:30 AM IST
2ಎಚ್ಎಸ್ಎನ್6. :  | Kannada Prabha

ಸಾರಾಂಶ

ಸಮಾಜದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ಮುಂದಾಗಬೇಕು. ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮುದಾಯದ ಪ್ರಗತಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಭಾವಂತರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ತಾಲೂಕು ಭೋವಿ ಸಮಾಜ ಕೈಗೊಂಡಿದೆ ಎಂದು ಉಮಾಶಂಕರ್ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ತಾಲೂಕು ಭೋವಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಸಮಾಜದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ಮುಂದಾಗಬೇಕು. ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳು ಜಾತಿ ದೃಢೀಕರಣ ಪತ್ರ, ಎರಡು ಭಾವಚಿತ್ರಗಳು, ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು 9845006931, 9742447794 ಅಥವಾ 9742498619 ಸಂಖ್ಯೆಗಳ ವಾಟ್ಸಪ್‌ಗೆ ಕಳುಹಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಸಮಾಜದ ಮುಖಂಡ ನಾಗರಾಜ್, ತಾಲೂಕು ಭೋವಿ ಸಮಾಜದ ವತಿಯಿಂದ ಇದೇ ಮೊದಲ ಬಾರಿಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಮಾಜದ ಎಲ್ಲಾ ಸದಸ್ಯರು ಹಾಗೂ ಪೋಷಕರು ಇದರಲ್ಲಿ ಭಾಗವಹಿಸಿ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಮನವಿ ಮಾಡಿದರು.

ಪ್ರತಿಭಾ ಪುರಸ್ಕಾರಕ್ಕಾಗಿ ಹೆಸರು ನೋಂದಾಯಿಸಲು ಜುಲೈ 10 ಕೊನೆಯ ದಿನಾಂಕವಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂತರಾಜ್, ಪಡುವನಹಳ್ಳಿ ಶಿವಣ್ಣ, ಲೋಹಿತ್ ಸೇರಿ ಸಮಾಜದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣವಾದದ್ದು: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ
ರೈತರ ನೆರವಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಧಾವಿಸಲಿ: ಶಾಸಕ ಸಿಎನ್ ಬಾಲಕೃಷ್ಣ