ಕನ್ನಡಪ್ರಭ ವಾರ್ತೆ ಮಳವಳ್ಳಿ
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಹಲವೆಡೆ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿ, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ನೀಡುತ್ತಿರುವ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಷಕ್ಕೆ 1 ಲಕ್ಷ ರು. ಹಣವನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡುವ ಮೂಲಕ ಮನೆ ಯಜಮಾನಿಯನ್ನು ಬಲವರ್ಧನೆಗೊಳಿಸಲು ಹೊರಟಿದೆ ಎಂದರು.
ಈ ವೇಳೆ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಘೋಷಣೆ ಮಾಡಿರುವ ಹೊಸ ಗ್ಯಾರಂಟಿಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಟ್ಟರು.ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಹೊಸ ಪಥದಲ್ಲಿ ದೇಶದ ಪ್ರಗತಿಯಾಗಲಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನ ಜೊತೆಗೆ ಹೆಣ್ಣು ಆರ್ಥಿಕವಾಗಿ ಶಕ್ತಿವಂತರಾದರೆ ದೇಶವೂ ಆರ್ಥಿಕವಾಗಿ ಪ್ರಗತಿ ಸಾಧಿಸಲಿದೆ ಎಂಬುದನ್ನು ಕಾಂಗ್ರೆಸ್ ನ ಗ್ಯಾರಂಟಿಗಳು ರುಜುವಾತು ಪಡಿಸಿವೆ ಎಂದರು.
ಮಂಡ್ಯ ಜಿಲ್ಲೆಯ 4.49 ಲಕ್ಷ ಮನೆಯ ಯಜಮಾನಿಯರಿಗೆ ತಿಂಗಳಿಗೆ ತಲಾ 2,000 ರುಪಾಯಿಯಂತೆ ಈ ವರೆಗೆ 512 ಕೋಟಿ ರುಪಾಯಿಯನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಇದಲ್ಲದೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಲ್ಲಿ ವರ್ಷಕ್ಕೆ ಒಂದು ಲಕ್ಷ ಹೆಚ್ಚುವರಿಯಾಗಿ ಸಿಗಲಿದೆ. ಅಂದರೆ ಪ್ರತಿ ತಿಂಗಳಿಗೆ ಮಹಿಳೆಯರಿಗೆ 10 ಸಾವಿರಕ್ಕೂ ಅಧಿಕ ಹಣ ಅವರ ಕೈ ಸೇರಿಲಿದೆ. ಮಹಿಳೆಯರಿಗೆ ಇಷ್ಟೆಲ್ಲಾ ಅನುಕೂಲ ಮಾಡಿಕೊಟ್ಟಿರುವ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವ ಹೊಣೆಗಾರಿಕೆ ಮನೆ ಮನೆ ಯಜಮಾನಿಯ ಮೇಲಿದೆ ಎಂದರು.