ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಮಹಿಳಾ ಸಬಲೀಕರಣ

KannadaprabhaNewsNetwork |  
Published : May 01, 2024, 01:20 AM IST
(30ಎನ್.ಆರ್.ಡಿ1 ಮತಯಾಚನೆ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡುತ್ತಿದ್ದಾರೆ.) | Kannada Prabha

ಸಾರಾಂಶ

ಕಾಂಗ್ರೆಸ್ ಗ್ಯಾರಂಟಿಯಿಂದ ಭಯಗೊಂಡಿರುವ ಬಿಜೆಪಿ ಭ್ರಮನಿರಸನಗೊಂಡಿದೆ. ₹20 ವರ್ಷ ಆಳಿದ ಸಂಸದರ ಸಾಧನೆ ಶೂನ್ಯ

ನರಗುಂದ: ಮಹಿಳೆಯರ ಪರ ಯೋಜನೆ ಜಾರಿ ಮಾಡಿ ರಕ್ಷಣೆಗೆ ಕಂಕಣಬದ್ಧವಾದ ಏಕೈಕ ಪಕ್ಷ ಕಾಂಗ್ರೆಸ್‌ ಆಗಿದೆ. ಅದು ಅಧಿಕಾರಕ್ಕೆ ಬಂದರೆ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.

ಅವರು ಸೋಮವಾರ ಸಂಜೆ ಪಟ್ಟಣದ ಗಾಂಧಿ ಚೌಕ್‌ನಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, ವಿರೋಧ ಪಕ್ಷದ ನಾಯಕರು, ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ, ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿ ಮಹಿಳೆಯರನ್ನು ಅವಮಾನಿಸುತ್ತಿರುವುದು ಅವರ ಪಕ್ಷದ ನಡವಳಿಕೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಗ್ಯಾರಂಟಿಯಿಂದ ಭಯಗೊಂಡಿರುವ ಬಿಜೆಪಿ ಭ್ರಮನಿರಸನಗೊಂಡಿದೆ. ₹20 ವರ್ಷ ಆಳಿದ ಸಂಸದರ ಸಾಧನೆ ಶೂನ್ಯ. ಬದಲಾವಣೆಗಾಗಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಒಂದು ಲಕ್ಷ ನೀಡಲಾಗುವುದು ಎಂದರು.

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಮಾತನಾಡಿ, ಮೋದಿಯವರಿಂದ ಅಭಿವೃದ್ಧಿ ಅಸಾಧ್ಯ. ಕೇವಲ ಸುಳ್ಳು ಹೇಳುತ್ತಾ ಜನರಿಗೆ ದ್ರೋಹ ಬಗೆದಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಸಂಸದರಾದ ಗದ್ದಿಗೌಡರು ಸಂಸತ್ತಲ್ಲಿ ಮಾತನಾಡದ ಸಂಸದರ ಸಾಲಿಗೆ ಸೇರಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ.ಇಂತಹ ಸಂಸದರನ್ನು ಸೋಲಿಸಿ ಜನರ ಧ್ವನಿಯಾಗುವ ಸಂಯುಕ್ತಾರನ್ನು ಬೆಂಬಲಿಸುವಂತೆ ವಿನಂತಿಸಿದರು.

ಸಚಿವ ಶಿವಾನಂದ ಪಾಟೀಲ ಮಾತನಾಡಿ, ಬಾಗಲಕೋಟೆ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸಿದೆ. ರಾಜ್ಯದಲ್ಲಿ 18 ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ಮಾಜಿ ಶಾಸಕ ಬಿ.ಆರ್. ಯಾವಗಲ್ ಮಾತನಾಡಿ, ಅಭಿವೃದ್ಧಿ ಪರ ಆಡಳಿತಕ್ಕೆ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್‌ ಯುವ ಮುಖಂಡ ವಿವೇಕ ಯಾವಗಲ್, ಕೃಷ್ಟಪ್ಪ ಜೋಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಆರ್.ಎನ್. ಪಾಟೀಲ ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಅಪ್ಪಣ್ಣ ನಾಯ್ಕರ, ಎಫ್.ವೈ. ದೊಡಮನಿ, ರಾಜುಗೌಡ ಕೆಂಚನಗೌಡ್ರ, ದ್ಯಾಮಣ್ಣ ಸವದತ್ತಿ, ಪ್ರವೀಣ ಯಾವಗಲ್ , ಉಮಾ ದ್ಯಾವನೂರ, ವಿರೇಶ ಚುಳಕಿ, ವಿಜಯ ಚಲವಾದಿ, ಸಿ.ಬಿ. ಪಾಟೀಲ, ವಿಷ್ಟು ಸಾಠೆ, ಪ್ರಕಾಶ ಹಡಗಲಿ ಹಾಗೂ ಕಾಂಗ್ರೆಸ್ ಮುಖಂಡರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ