ಸೋಬಾನೆ ಪದ, ಜನಪದ ಕಲೆಗಳನ್ನು ಪ್ರೋತ್ಸಾಹಿಸಿ: ವಿ.ಪಿ.ನಾಗೇಶ್

KannadaprabhaNewsNetwork |  
Published : Dec 20, 2025, 01:30 AM IST
19ಕೆಎಂಎನ್‌ಡಿ-4ಹಲಗೂರು ಸಮೀಪದ ಬೆನಮನಹಳ್ಳಿ ಗ್ರಾಮದ ಶ್ರೀ ಕೋಡಿ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಜನಪದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವಿ.ಪಿ. ನಾಗೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಜನಪದ ನಮ್ಮ ನೆಲದ ಸಂಸ್ಕೃತಿ. ಜೀವನಾನುಭವದಿಂದ ಬೆಳೆದುಬಂದಿರುವ ಕಲೆಯನ್ನು ಉಳಿಸುವುದು ಅಗತ್ಯವಿದೆ. ಜನಪದದ ಮಹತ್ವವನ್ನು ಹೊಸ ತಲೆಮಾರಿಗೆ ತಿಳಿಸುವ ಮೂಲಕ ಅವರಲ್ಲೂ ಜನಪದದ ಬಗ್ಗೆ ಅಭಿರುಚಿ ಬೆಳೆಸಬೇಕಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಸೋಬಾನೆ ಪದಗಳು ಹಾಗೂ ಜನಪದ ಕಲೆಗಳನ್ನು ಇಂದಿನ ಯುವ ಪೀಳಿಗೆ ಉಳಿಸಿ ಬೆಳೆಸುವ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವಿ.ಪಿ.ನಾಗೇಶ್ ತಿಳಿಸಿದರು.

ಸಮೀಪದ ಬೆನಮನಹಳ್ಳಿ ಗ್ರಾಮದ ಶ್ರೀಕೋಡಿ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೆಂಪೇಗೌಡ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯಿಂದ ಜನಪದ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಜನಪದ ನಮ್ಮ ನೆಲದ ಸಂಸ್ಕೃತಿ. ಜೀವನಾನುಭವದಿಂದ ಬೆಳೆದುಬಂದಿರುವ ಕಲೆಯನ್ನು ಉಳಿಸುವುದು ಅಗತ್ಯವಿದೆ. ಜನಪದದ ಮಹತ್ವವನ್ನು ಹೊಸ ತಲೆಮಾರಿಗೆ ತಿಳಿಸುವ ಮೂಲಕ ಅವರಲ್ಲೂ ಜನಪದದ ಬಗ್ಗೆ ಅಭಿರುಚಿ ಬೆಳೆಸಬೇಕಿದೆ ಎಂದು ನುಡಿದರು.

ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಪುಟ್ಟರಾಮು ಮಾತನಾಡಿ, ಆಧುನಿಕ ಯುಗದಲ್ಲಿ ಜನಪದ ಸಂಸ್ಕೃತಿಯನ್ನು ಎಲ್ಲರೂ ಮರೆಯುತ್ತಿದ್ದಾರೆ. ಅದನ್ನು ಪುನಶ್ಚೇತನಗೊಳಿಸುವ ಅಗತ್ಯವಿದೆ. ಅದಕ್ಕಾಗಿ ಎಲ್ಲರೂ ಜನಪದ ಕಲೆಗಳನ್ನು ಪ್ರೋತ್ಸಾಹಿಸಿ ಸಂಸ್ಕೃತಿಯನ್ನು ಜೀವಂತವಾಗಿಡುವುದಕ್ಕೆ ಸಂಕಲ್ಪ ಮಾಡುವಂತೆ ತಿಳಿಸಿದರು.

ಮಲ್ಲೇಶ್ ಮತ್ತು ತಂಡದಿಂದ ತಮಟೆ ವಾದನ, ಪ್ರಸಾದ ಮತ್ತು ತಂಡ ಬನ್ನೂರು ಇವರಿಂದ ಪೂಜಾ ಕುಣಿತ, ಮಂಜುನಾಥ್ ಮತ್ತು ತಂಡ ಮಂಡ್ಯದವರಿಂದ ವೀರಗಾಸೆ ಕುಣಿತ, ಶ್ರೀಧರ್ ಮತ್ತು ತಂಡದ ರಿಂದ ಪಟದ ಕುಣಿತ, ಹರ್ಷ ಮತ್ತು ತಂಡಗಳಿಂದ ಸಮೂಹ ನೃತ್ಯ, ಚೇತು ಮತ್ತು ತಂಡದಿಂದ ಡೊಳ್ಳು ಕುಣಿತ, ಶಿವು ಮತ್ತು ತಂಡದಿಂದ ಚಿಲಿಪಿಲಿ ಗೊಂಬೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಟ್ರಸ್ಟಿನ ಅಧ್ಯಕ್ಷರಾದ ಗಂಗಾಧರ್, ಅಂತಾರಾಷ್ಟ್ರೀಯ ಮಟ್ಟದ ಗಾಯಕರು ಹಾಗೂ ಸಾಹಿತಿಗಳು ಆದ ಬಿ.ಆರ್. ಶಿವಕುಮಾರ್, ಲಿಂಗಪಟ್ಟಣ ಗ್ರಾಪಂ ಅಧ್ಯಕ್ಷೆ ಸುಕನ್ಯ, ನಿಟ್ಟೂರು ಗ್ರಾಪಂ ಅಧ್ಯಕ್ಷೆ ಶಿವಮ್ಮ, ಮರಿಸ್ವಾಮಿ ,ರಮೇಶ್, ಕುಮಾರ್, ಎಚ್.ವಿ.ರಾಜು, ದೊರೆಸ್ವಾಮಿ, ಮಂಜು, ಎಂ.ಕೆ.ಮಾದೇವ, ಶಿವಕುಮಾರ್, ಶಿವಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!