ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತ ಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪಾಲಕರು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತ ಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪಾಲಕರು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ಬಸವಭವನದಲ್ಲಿ ಗುರುವಾರ ನೂಪುರ ನೃತ್ಯ ವಿದ್ಯಾಮಂದಿರದ ನೃತ್ಯ ವೈಭವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಕ್ಕಳನ್ನು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತಗೊಳಿಸದೇ ಶಾಸ್ತ್ರೀಯ ಸಂಗೀತ, ನೃತ್ಯ, ಭಾರತೀಯ ಕಲಾಪ್ರಕಾರ ಕಲಿಯಲು ಪ್ರೋತ್ಸಾಹಿಸಬೇಕು. ಇದರಿಂದ ದೇಶದ ಸಂಸ್ಕೃತಿ ಉಳಿಸಿ ಬೆಳೆಸಿದಂತಾಗುತ್ತದೆ. ಮಕ್ಕಳಿಗೆ ದೈಹಿಕ ಮಾನಸಿಕ ಬೆಳವಣಿಗೆಗೆ ನೃತ್ಯ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ. ಡಾ.ಸುನಂದಾ ಎಸ್. ಶಿರೂರ ಮಾತನಾಡಿ, ಮೊಬೈಲ್ ಗೀಳಿನಿಂದಾಗಿ ಮಕ್ಕಳು ಚಟುವಟಿಕೆ ರಹಿತರಾಗಿದ್ದಾರೆ. ಸಂಗೀತ ನೃತ್ಯದಲ್ಲಿ ಪಾಲ್ಗೊಳ್ಳುವ ಮಕ್ಕಳು ಮಾನಸಿಕ, ದೈಹಿಕವಾಗಿ ಸದೃಢರಾಗುತ್ತಾರೆ. ನೃತ್ಯದ ಭಂಗಿಗಳು ಯೋಗಸಾಧನವಿದ್ದಂತೆ, ಇದರಿಂದ ಮಾನಸಿಕ ಬಲ ದೊರೆಯುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಹಾಡುಗಾರಿಕೆ ಸಾಗರದ ವಿದ್ವಾನ್ ಅಶೋಕ ಹೆಗ್ಗೊಡು, ಹೊನ್ನಾವರದ ವಿದ್ವಾನ್ ಪದ್ಮರಾಜ ಭಟ್ಟ ಮೃದಂಗ, ಧಾರವಾಡದ ವಿದ್ವಾನ್ ಶಂಕರ ಕಬಾಡಿ ವಯಲಿನ್, ಧಾರವಾಡದ ವೈಭವ ಭಟ್ಟ್ ಕೊಳಲು ಸಾಥ್ ನೀಡಿದರು. ಶ್ರೀನಿವಾಸ ಕಟ್ಟಿಮನಿ, ರತ್ನಾ ಅಮೀತ ಸೇಠ ನಿರೂಪಿಸಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.