ಸಾವಯವ ಕೃಷಿ ಕುರಿತ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಶಾಸಕ ಟಿ.ರಘುಮೂರ್ತಿ ಹೇಳಿಕೆಕನ್ನಡಪ್ರಭ ವಾರ್ತೆ ಚಳ್ಳಕೆರೆ
ರೈತ ಸಮುದಾಯ ತಮಗೆ ಲಭ್ಯವಿರುವ ಜಮೀನಿನಲ್ಲಿ ಒಂದೇ ಹಂತದ ವಿವಿಧ ಬೆಳೆ ಬೆಳೆಯಲು ಎಲ್ಲಾ ರೀತಿಯ ಸಹಕಾರವಿದ್ದಲ್ಲಿ ತೋಟಗಾರಿಕೆ ಬೆಳೆ ಬೆಳೆದು ಲಾಭದತ್ತ ಮುನ್ನಡೆಯುವಂತೆ ಮನವಿ ಮಾಡಿದರು.
ತೋಟಗಾರಿಕೆ ಬೆಳೆಗಳಾದ ಅಡಕೆ, ದಾಳಿಂಬೆ, ತೆಂಗು, ಬಾಳೆ, ಪಪ್ಪಾಯಿ, ಮಾವು ಮುಂತಾದ ಬೆಳೆಗಳು ರೈತರಿಗೆ ಹೆಚ್ಚು ಆರ್ಥಿಕ ಶಕ್ತಿ ತುಂಬುವವು ಎಂದು ಹೇಳಿದರು.ಸಾವಯವ ಕೃಷಿ ತಜ್ಞ ಯೋಗೇಶ್ ಅಪ್ಪಾಜಯ್ಯ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಸಾವಯನ ಕೃಷಿಯೂ ವರದಾನವಾಗಿದೆ ಎಂಬುವುದನ್ನು ಅನೇಕ ರೈತರು ಈಗಾಗಲೇ ನಿರೂಫಿಸಿದ್ಧಾರೆ. ಈ ಹಿಂದೆ ರೈತ ಸಾವಯವ ಕೃಷಿ ಕ್ಷೇತ್ರದಿಂದ ದೂರವಿದ್ದು, ಇತ್ತೀಚಿನ ದಿನಗಳಲ್ಲಿ ಸಾವಯವ ಕೃಷಿ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಿದ್ದಾರೆ. ಸಾವಯವ ಕೃಷಿಯ ಪ್ರತಿಬೆಳೆಯೂ ಹೆಚ್ಚು ಲಾಭವನ್ನು ತಂದುಕೊಡುತ್ತವೆ. ಆದರೆ, ರೈತರು ಸಾವಯವ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಸೌಲಭ್ಯ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ಕೃಷಿ ವಿಜ್ಞಾನಿ ಡಾ.ಓಂಕಾರಪ್ಪ ಮಾತನಾಡಿ, ಪ್ರತಿಯೊಬ್ಬ ಮನುಷ್ಯನು ನಾನಾಕಾರಣಗಳಿಂದ ನಿಶಕ್ತನಾಗತ್ತಾನೆ. ಯಾವುದೇ ಕೆಲಸ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅದೇ ರೀತಿ ರೈತರು ತಮ್ಮ ಬೆಳೆಗಳನ್ನು ಸೂಕ್ತ ರೀತಿಯಲ್ಲಿ ಬೆಳೆಯಲು ವಿಫಲವಾದಾಗ ಮಾರುಕಟ್ಟೆ ಸಮಸ್ಯೆ ಉಂಟಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿ ತನ್ನ ಆರೋಗ್ಯದ ಬಗ್ಗೆ ಯಾವ ರೀತಿಯ ಗೌರವ ಕೊಡುತ್ತಾನೋ ಅದೇ ರೀತಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೇಳಿದರು.ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಕೆ.ಪಿ.ಭೂತಯ್ಯ, ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ತಿಪ್ಪೇಸ್ವಾಮಿ, ಕರಿಯಪ್ಪ ಮಾತನಾಡಿದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಕೆಪಿಸಿ ಸದಸ್ಯರಾದ ನೇತ್ರಾವತಿ, ಅಂಗಡಿ ರಮೇಶ್, ರೈತ ಮುಖಂಡರಾದ ಶ್ರೀಕಂಠ ಮೂರ್ತಿ, ಹೆಗ್ಗೆರೆ ಆನಂದಪ್ಪ, ಆರ್.ಮಲ್ಲೇಶಪ್ಪ, ಕೃಷಿ ಸಹಾಯಕ ನಿರ್ದೇಶಕ ಜೆ.ಅಶೋಕ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ರೇಷ್ಮೆ ಅಧಿಕಾರಿ, ಉಮಾಪತಿ, ಪಶು ಅಧಿಕಾರಿ ಡಾ.ರೇವಣ್ಣ ಮುಂತಾದವರು ಪಾಲ್ಗೊಂಡಿದ್ದರು.