ಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜಿನ ಜಿಲ್ಲಮಟ್ಟದ ಕ್ರೀಡಾಕೂಟ
ಉತ್ತಮ ಸಾಧನೆಗೆ ಕಠಿಣ ಪರಿಶ್ರಮವಿರಬೇಕು. ಪ್ರೋತ್ಸಾಹ, ಪ್ರೇರಣೆ ನಿರಂತರ ಪರಿಶ್ರಮವೇ ಸಾಧನೆಗೆ ಸ್ಪೂರ್ತಿಯಾಗುತ್ತದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಉಮೇಶ್ ಪುದುವಾಳ್ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ಆಯೋಜಿಸಿದ್ದ ಜಿಲಾಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಪ್ರಶಸ್ತಿ ವಿತರಿಸಿ ಮಾತನಾಡಿದರು.ವಿದ್ಯಾರ್ಥಿಗಳು ತಮ್ಮ ಕಲಿಕೆ ದಿನಗಳಲ್ಲಿ ಪಠ್ಯಚಟುವಟಿಕೆಗಳ ಜೊತೆಗೆ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸೋಲು ಗೆಲವು ಮುಖ್ಯ ವಲ್ಲ ಸ್ಪರ್ಧೆಮುಖ್ಯ. ಕ್ರೀಡೆಗಳಿಂದ ಶಾರೀರಿಕ ಜೊತೆಗೆ ಮಾನಸಿಕ ಸದೃಡತೆಯಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಅವಶ್ಯಕತೆ ಯಿದೆ. ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕ್ರೀಡಾಕೂಟ ನಡೆಸುವುದರಿಂದ ಸ್ವಲ್ಪ ತೊಂದರೆಯಾಗುತ್ತಿದೆ ಎಂದರು.
ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಡಾ. ಶ್ರೀಮಂದಾರ ಮಾತನಾಡಿ ಕೇಂದ್ರ ರಾಜ್ಯ ಸರ್ಕಾರಗಳು ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಸರ್ಕಾರಿ ನೌಕರಿಗಳಲ್ಲಿ ಶೇ. 2 ರಷ್ಟು ವಿಶೇಷ ಮೀಸಲಾತಿ ಸೌಲಭ್ಯವಿದ್ದು, ವಿದ್ಯಾರ್ಥಿಗಳು ಅದರ ಸದ್ಭಳಕೆ ಮಾಡಬೇಕು ಎಂದರು. ಉಪನ್ಯಾಸಕರಾದ ಮಹೇಶ್ ಕಾಕತ್ಕರ್, ಸ್ಮಿತಾ, ಕವಿತಾ, ಅಮಿತಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೆ.ಎಲ್. ಗೋಪಾಲಕೃಷ್ಣ ಮತ್ತಿತರರು ಇದ್ದರು.
22 ಶ್ರೀ ಚಿತ್ರ 1-ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.