ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ಅಗತ್ಯ : ರುದ್ರೇಗೌಡ

KannadaprabhaNewsNetwork |  
Published : Dec 24, 2023, 01:45 AM IST
ಪೊಟೋ: 23ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಅರಿವು ಸಮಾರೋಪ ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.  | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ ಕ್ಷೇತ್ರ ಅಭ್ಯುದಯಕ್ಕಾಗಿ ಹೊಸ ಹೊಸ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ಬೇಕೆಂದು ವಿಧಾನ ಪರಿಷತ್ತು ಸದಸ್ಯ ಎಸ್‌.ರುದ್ರೇಗೌಡ ಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅಂತರ ರಾಷ್ಟ್ರೀಯ ಮಟ್ಟದಲ್ಲಿ ಉತ್ಪನ್ನಗಳನ್ನು ಸರಬರಾಜು ಮಾಡುವ ಶಕ್ತಿ ಹೊಂದಿರುವ ಜಿಲ್ಲೆ ಶಿವಮೊಗ್ಗ ಆಗಿದ್ದು, ಹೊಸ ಕೈಗಾರಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ತು ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಿಡ್ಬಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಅರಿವು ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈಲ್ವೆ, ಏರೋನಾಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಶಿವಮೊಗ್ಗದಿಂದ ಆಟೋಮೊಬೈಲ್ ಉತ್ಪನ್ನಗಳು ಸರಬರಾಜು ಆಗುತ್ತಿದ್ದು, ಇನ್ನಷ್ಟು ಶಕ್ತಿ ಬೇಕಿದೆ. ಹೊಸ ಕೈಗಾರಿಕೆಗಳಿಗೆ ಸ್ಥಳದ ಕೊರತೆ ನೀಗಿಸಿ, ಯುವ ಉತ್ಸಾಹಿಗಳಿಗೆ ಕೈಗಾರಿಕೆ ಆರಂಭಿಸಲು ಪ್ರೋತ್ಸಾಹ ನೀಡಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ತಿಳಿಸಿದರು.

ಕಾಸಿಯಾ ಅಧ್ಯಕ್ಷ ಸಿ.ಎ. ಶಶಿಧರ ಶೆಟ್ಟಿ ಮಾತನಾಡಿ, ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ, ಯೂನಿಯನ್ ಬ್ಯಾಂಕ್ ಹಾಗೂ ವಿವಿಧ ಸಂಘಟನೆಗಳು ಸಹಕಾರ ನೀಡಿದ್ದವು. ಇದೇ ಸಂದರ್ಭದಲ್ಲಿ ಕೈಗಾರಿಕಾ ವಸ್ತು ಪ್ರದರ್ಶನ ಮಳಿಗೆಯವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಪ್ರಮುಖರಾದ ಡಿ.ಎಂ. ಶಂಕರಪ್ಪ, ಎಚ್.ಕೆ. ಮಲ್ಲೇಶ್ ಗೌಡ, ಜಿ.ವಿಜಯ್‌ಕುಮಾರ್, ರಮೇಶ್ ಹೆಗ್ಡೆ, ಎಂ.ಜಿ. ರಾಜಗೋಪಾಲ್, ಜಿ.ವಿ. ಕಿರಣ್‌ಕುಮಾರ್, ವಿಶ್ವೇಶ್ವರಯ್ಯ, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

- - -

-23ಎಸ್‌ಎಂಜಿಕೆಪಿ02: ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?