ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯೂ ಎಂಬುವವರು ಅಣೆಕಟ್ಟೆಯ ಉತ್ತರ ಭಾಗದ ಸರ್ವೇ ನಂ.279ರಲ್ಲಿ ಸರ್ಕಾರಿ ದಾಖಲೆಗಳ ಪ್ರಕಾರ 2 ರಿಂದ 3 ಎಕರೆ ಜಮೀನು ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ಹಿನ್ನೀರು ಪ್ರದೇಶದ ಸುಮಾರು 3 ರಿಂದ 4 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿದ್ದಾರೆಂದು ಆಪಾದಿಸಲಾಗಿದೆ.
ಇದರ ಜೊತೆಗೆ ತಮ್ಮ ಜಮೀನಿಗೆ ಹೊಂದಿಕೊಂಡಂತಿದ್ದ ಕೆಆರ್ಎಸ್ ಹಿನ್ನಿರಿನ ಪ್ರದೇಶ ತನಗೆ ಸೇರಿದೆ ಎಂದು ಸುಮಾರು 30 ಅಡಿ ಉದ್ದ 100 ಅಡಿ ಅಗಲದಷ್ಟು ಹಿನ್ನಿರಿನ ಪಾತ್ರವನ್ನು ಅತಿಕ್ರಮಿಸಿಕೊಂಡು ಗುಂಡಿ ತೋಡಿ ಕಲ್ಲುಗಳನ್ನು ಹಾಕಿ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಸುತ್ತಿರುವುದಾಗಿ ದೂರಲಾಗಿದೆ.ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ಸಹಾಯದಿಂದ ಅತಿಕ್ರಮಣ ನಡೆಯುತ್ತಿದ್ದು, ಒತ್ತುವರಿ ಜಾಗದಲ್ಲಿ ಜೆಸಿಬಿ ಮೂಲಕ ಟ್ರಂಚ್ ತೆಗೆದು ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಒತ್ತುವರಿಯಿಂದ ಅಣೆಕಟ್ಟೆಗೆ ಅಪಾಯದ ಜೊತೆಗೆ ಸಂಗ್ರಹ ಸಾಮರ್ಥ್ಯ ಸಹ ಕುಗ್ಗಲಿದೆ ಹೀಗಿದ್ದರೂ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸುಮಾರು 326 ಕಿ.ಮೀ. ವಿಸ್ತೀರ್ಣದ ಅಣೆಕಟ್ಟೆ ಹಿನ್ನಿರಿನ ಪ್ರದೇಶದಲ್ಲಿ ಹಲವಾರು ಕಡೆ ಸಾಮಾನ್ಯರಿಂದ ಹಿಡಿದು ಗಣ್ಯವ್ಯಕ್ತಿಗಳೂ ಸಹ ಹಿನ್ನೀರಿನ ಪ್ರದೇಶ ಒತ್ತವರಿ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸಲು ಹೋದ ಅಧಿಕಾರಿಗಳಿಗೆ ರಾಜಕೀಯ ಪ್ರಭಾವ ಬೀರಿ ಕ್ರಮ ಜರುಗಿಸದಂತೆ ನೋಡಿಕೊಳ್ಳುತ್ತಿರುವುದರಿಂದ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ ಎಂದು ಆರೋಪಿಸಲಾಗಿದೆ.
- ಮಜ್ಜಿಗೆಪುರ ಮಂಜುನಾಥ್, ಸದಸ್ಯರು, ಹುಲಿಕೆರೆ ಪಂಚಾಯ್ತಿ
ಕೆಆರ್ಎಸ್ ಒಳಹರಿವಿನಲ್ಲಿ ಹೆಚ್ಚಳ
ಕನ್ನಡಪ್ರಭ ವಾರ್ತೆ ಮಂಡ್ಯಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿರುವುದರಿಂದ ಕೃಷ್ಣರಾಜಸಾಗರ ಜಲಾಶಯದ ಒಳಹರಿವಿನಲ್ಲಿ ಅಲ್ಪಪ್ರಮಾಣದ ಹೆಚ್ಚಳವಾಗಿದೆ. ಮಂಗಳವಾರ 1000 ಕ್ಯುಸೆಕ್ ಇದ್ದ ಕೆಆರ್ಎಸ್ ಒಳಹರಿವು ಬುಧವಾರ 2241 ಕ್ಯುಸೆಕ್ಗೆ ಹೆಚ್ಚಿದೆ. ಜಲಾಶಯದಿಂದ 986 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಪ್ರಸ್ತುತ ಅಣೆಕಟ್ಟೆಯಲ್ಲಿ 87.90 ಅಡಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಕೆಆರ್ಎಸ್ನಲ್ಲಿ 14.724 ಟಿಎಂಸಿ ನೀರು ಸಂಗ್ರಹವಾಗಿದೆ.