ಶಾಲೆ ಜಾಗ ಒತ್ತುವರಿ: ಪ್ರಾಂಶುಪಾಲರಿಂದ ಸ್ಪಷ್ಟನೆ ಕೋರಿದ ಸ್ಥಳ ದಾನಿಗಳು

KannadaprabhaNewsNetwork |  
Published : Jan 28, 2026, 03:30 AM IST
ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯಹಳೆಯ ವಿದ್ಯಾರ್ಥಿಗಳು  ಹಾಗೂ ಸಾರ್ವಜನಿಕರು ಸೋಮವಾರಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಾಂಶುಪಾಲರನ್ನು ಭೇಟಿಯಾಗಿ ಪ್ರೌಢ ಶಾಲೆಯ ಜಾಗ ಒತ್ತುವರಿಯಾಗಿರುವಬಗ್ಗೆ ಸ್ಪಷ್ಟನೆಯನ್ನು ಕೋರಿದರು. | Kannada Prabha

ಸಾರಾಂಶ

ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಸ್ಥಳ ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೋಮವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಕಾಲೇಜಿನಲ್ಲಿ ಭೇಟಿಯಾಗಿ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ಸ್ಪಷ್ಟನೆ ಕೋರಿದರು.

ನಾಪೋಕ್ಲು: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ಸ್ಥಳ ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೋಮವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಕಾಲೇಜಿನಲ್ಲಿ ಭೇಟಿಯಾಗಿ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ಸ್ಪಷ್ಟನೆ ಕೋರಿದರು.

ಬೇತು ಗ್ರಾಮದ ಬೊಳ್ಳೆಪಂಡ, ಚೋಕಿರ, ಕೀಕಂಡ ಮತ್ತು ಪೋರಾಡ್ ಬ್ರಾಹ್ಮಣರ ಕುಟುಂಬಸ್ಥರು ಉದಾರವಾಗಿ ನೀಡಿದ ಜಾಗ ಒತ್ತುವರಿಯಾಗಿದೆ. ಪ್ರಾಂಶುಪಾಲರು ಸಂಬಂಧಿಸಿದವರಿಗೆ ಪತ್ರ ಬರೆದರೂ ಸಂಪೂರ್ಣ ನಿರ್ಲಕ್ಷ್ಯ ಮಾಡಿ ಸರ್ಕಾರಿ ಶಾಲೆ ಜಾಗದಲ್ಲಿ ಶಾದಿ ಮಹಲ್ ಕಟ್ಟಲು ಅಧಿಕಾರಿಗಳು ಅವಕಾಶ ನೀಡಿರುವ ಬಗ್ಗೆ ಆಕ್ಷೇಪ ವ್ಯಕ್ತವಾಯಿತು.

ಒತ್ತುವರಿ ಜಾಗ ತೆರವು, ಮುಂದೆ ಆಗಬಹುದಾದಂತಹ ಭೂಕಬಳಿಕೆಯನ್ನು ತಡೆಗಟ್ಟ ಬೇಕಾಗಿದೆ

ಎಂದು ಸ್ಥಳ ದಾನಿಗಳ ಕುಟುಂಬಸ್ಥರು, ಹಳೆ ವಿಧ್ಯಾರ್ಥಿಗಳು, ಆಡಳಿತ ಮಂಡಳಿಯವರು ಸಭೆಯಲ್ಲಿ ಅಭಿಪ್ರಾಯಪಟ್ಟರು.

ನಾಪೋಕ್ಲು ಕಾಲೇಜಿನ ಜಾಗದಲ್ಲಿ ಶಾದಿಮಹಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶಾಸಕರು ಶಾದಿ ಮಹಲ್ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಈ ಸ್ಥಳವು ಕಾಲೇಜಿಗೆ ಸೇರಿದ್ದೋ ಅಥವಾ ಶಾದಿಮಹಲ್ ಫಲಾನುಭವಿಗಳಿಗೆ ಸೇರಿದ್ದೋ ಎಂಬುವುದು ಗೊಂದಲದಲ್ಲಿದ್ದು, ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಯವರು ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರಿಗೆ, ಜಿಲ್ಲಾಧಿಕಾರಿಗೆ ಲಿಖಿತವಾಗಿ ಅರ್ಜಿ ನೀಡಿದ್ದು, ಸರ್ವೆ ಕಾರ್ಯ ಮಾಡಿ ಈ ಗೊಂದಲವನ್ನು ನಿವಾರಿಸಿಕೊಡಬೇಕೆಂದು ಕೇಳಿಕೊಂಡಿದ್ದರೂ

ಯಾವುದೇ ಕ್ರ,ಮ ಕೈಗೊಳ್ಳದಿರುವುದು, ಸರ್ವೆ ಕಾರ್ಯ ಮಾಡದೆ, ಯಾವುದೇ ಸ್ಪಷ್ಟತೆ ಇಲ್ಲದೆ ಇದೀಗ ಕಟ್ಟಡ ನಿರ್ಮಾಣಕಾರ್ಯ ಭರದಿಂದ ಸಾಗುತ್ತಿರುವುದು ಸಂಶಯಕ್ಕೆ ಎಡೆಮಾಡಿದೆ. ಕಾಮಗಾರಿಯನ್ನು ಸ್ಥಗಿತ ಗೊಳಿಸಿ ಸರ್ವೆ ಆದ ನಂತರ ನ್ಯಾಯುತವಾಗಿ, ಕಾನೂನುಬದ್ದವಾಗಿ ಅವರದೇ ಸ್ಥಳದಲ್ಲಿ ಕಾಮಗಾರಿ ನಡೆಸಲು ಆದೇಶಿಸುವಂತೆ ಆಗ್ರಹಿಸಲಾಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲ ಶಿವಣ್ಣ ಎಂ. ಎಸ್., ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎನ್.ಎಸ್. ಉದಯಶಂಕರ್ ಪ್ರತಿಕ್ರಿಯಿಸಿ, ತಾವು ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಮಾಹಿತಿ ನೀಡಿದ್ದಲ್ಲದೆ ಪತ್ರ ವ್ಯವಹಾರ ಮಾಡಿದ ದಾಖಲೆ ಪತ್ರದೊಂದಿಗೆ ಮನವರಿಗೆ ಮಾಡಿಕೊಟ್ಟರು.

ಈ ಸಂದರ್ಭ ಕಾಲೇಜಿನ ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಜಿಪಂ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಸ್ಥಳ ದಾನಿಗಳಾದ ಕೀಕಂಡ ರಾಜ ಮೇದಪ್ಪ, ಮಕ್ಕಿ ಬ್ರಾಹ್ಮಣರ ನಾರಾಯಣ, ಕೀಕಂಡ ವಿಠಲ, ಹಳೆ ವಿದ್ಯಾರ್ಥಿಗಳಾದ ಕುಲ್ಲೇಟಿರ ಅಜಿತ್ ನಾಣಯ್ಯ,

ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಶಿವಚಳಿಯಂಡ ಜಗದೀಶ್, ಕುಂಡ್ಯೋಳಂಡ ವಿಶು ಪೂವಯ್ಯ, ಪಾಡಿಯಮ್ಮoಡ, ಮನು ಮಹೇಶ್ , ಬಿದ್ದಾ ಟಂಡ ಸಂಪತ್, ಕಂಗಾಂಡ ಜಾಲಿ ಪೂವಪ್ಪ, ಬಾಳೆಯಡ ಮೇದಪ್ಪ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ