ದಾರಿಗಾಗಿ ಆಗ್ರಹಿಸಿ ನಡೆದ ಅಹೋರಾತ್ರಿ ಧರಣಿ ಅಂತ್ಯ

KannadaprabhaNewsNetwork |  
Published : Mar 14, 2024, 02:04 AM IST
ತಾಳಿಕೋಟೆ 2 | Kannada Prabha

ಸಾರಾಂಶ

ತಾಳಿಕೋಟೆ: ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕೀರ್ತಿ ಚಾಲಕ ಇವರು ಭೇಟಿ ನೀಡಿ ಹೊಲಗಳಿಗೆ ದಾರಿ ಮಾಡಿಕೊಡಲು ಪ್ರಾರಂಭಿಸಿದ ಕಾರಣ ತಾಲೂಕಿನ ಪತ್ತೇಪೂರ ಪಿಟಿ ಗ್ರಾಮದ ವ್ಯಾಪ್ತಿಯ ರೈತರ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಹಿಂಪಡೆಯಲಾಗಿದೆ.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕೀರ್ತಿ ಚಾಲಕ ಇವರು ಭೇಟಿ ನೀಡಿ ಹೊಲಗಳಿಗೆ ದಾರಿ ಮಾಡಿಕೊಡಲು ಪ್ರಾರಂಭಿಸಿದ ಕಾರಣ ತಾಲೂಕಿನ ಪತ್ತೇಪೂರ ಪಿಟಿ ಗ್ರಾಮದ ವ್ಯಾಪ್ತಿಯ ರೈತರ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಹಿಂಪಡೆಯಲಾಗಿದೆ

ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕೀರ್ತಿ ಚಾಲಕ ಇವರು ಕೂಡಲೇ ದಾರಿ ಮಾಡಿ ಕೊಡಲು ಪ್ರಾರಂಭಿಸಲಾಗುವುದು. ಕಾರಣ ಧರಣಿ ಕೈ ಬಿಡಿ ಎಂದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮತ್ತು ದಾರಿ ಮಾಡಿಕೊಡಲು ಪ್ರಾರಂಭಿಸಿದ ಕಾರಣ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು. ಅಂದು ಮಧ್ಯಾಹ್ನ ೩ ಗಂಟೆಗೆ ಪೊಲೀಸ್ ಬಂದೋಬಸ್ತ್‌ನಲ್ಲಿ ತಹಸೀಲ್ದಾರ್‌ ನೇತೃತ್ವದಲ್ಲಿ ದಾರಿ ಮಾಡಿ ಕೊಡುವ ಕಾರ್ಯಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತ ಸಂಘದ ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ದ್ಯಾಮನಗೌಡ ಹಾದಿಮನಿ, ಶ್ರೀನಿವಾಸ ಗೊಟಗುಣಕಿ, ಮಲ್ಲನಗೌಡ ದೇವರಡ್ಡಿ, ತಾಲೂಕು ಉಪಾಧ್ಯಕ್ಷ ಶಿವಯೋಗಿ ಗೊಟಗುಣಕಿ, ಮಲ್ಲಣ್ಣ ಸಿಂಗನಳ್ಳಿ, ಮಡಿವಾಳವ್ವ ಮಾರಲಭಾವಿ, ಲಕ್ಷ್ಮೀಬಾಯಿ ಗೊಟಗುಣಕಿ, ಗಂಗಮ್ಮ ಸಿಂಗನಳ್ಳಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ