- ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಕಂದಾಯ ನೌಕರರಿಂದ ಅಧಿಕಾರಿಗಳಿಗೆ ಸನ್ಮಾನ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಈ ಸಂದರ್ಭ ಮಾತನಾಡಿ, ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಕಾನೂನು ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲೇಬೇಕು. ಅದರಲ್ಲೂ ಚುನಾವಣೆಯಂತಹ ಮಹತ್ತರ ಸಂದರ್ಭ ಪರಸ್ಪರ ಸಹಕಾರ, ಅನ್ಯೂನ್ಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಚುನಾವಣೆಯಂಥ ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಬಹುದು ಎಂದರು.
ಈ ನಿಟ್ಟಿನಲ್ಲಿ ಕಂದಾಯ ಇಲಾಖೆ ಎಲ್ಲ ನೌಕರರು ಸೇರಿದಂತೆ ವರ್ಗಾವಣೆಯಾಗಿರುವ ಹೊನ್ನಾಳಿ ತಹಸೀಲ್ದಾರ್ ಪುರಂದರ ಮತ್ತು ನ್ಯಾಮತಿ ತಹಸೀಲ್ದಾರ್ ಫಿರೋಜ್ ಷಾ ಅವರ ಕಾರ್ಯತತ್ಪರತೆ, ಪ್ರಾಮಾಣಿಕತೆ, ಅನ್ಯೂನ್ಯತೆಯನ್ನು ಅವಳಿ ತಾಲೂಕಿನ ಕಂದಾಯ ಇಲಾಖೆ ನೌಕರರು ಎಂದಿಗೂ ಮರೆಯುವಂತಿಲ್ಲ. ಅವರು ಕೆಲ ತಿಂಗಳಷ್ಟೇ ಇಲ್ಲಿ ಸೇವೆ ಸಲ್ಲಿಸಿರಬಹುದು. ಆದರೆ, ಅವರ ಕೆಲಸಗಳ ವಿಚಾರದಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಆಡಳಿತದಲ್ಲಿ ಮೂಡಿಸಿರುವುದು ಗಮನೀಯ ಎಂದು ಶ್ಲಾಘಿಸಿದರು.ಪುರಂದರ್ ಹಾಗೂ ಫಿರೋಜ್ ಷಾ ಅವರು ಮಾತನಾಡಿ, ಸ್ಥಳೀಯ ಅಧಿಕಾರಿಗಳು, ನೌಕರರು ಹಾಗೂ ಮಾಧ್ಯಮದವರು ತಮ್ಮ ಸೇವಾ ಅವಧಿಯಲ್ಲಿ ಉತ್ತಮವಾಗಿ ಸಹಕರಿಸಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
- - - -15ಎಚ್.ಎಲ್.ಐ2.:
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಿಂದ ಬೇರೆಡೆಗೆ ವರ್ಗಾವಣೆಯಾದ ತಹಸೀಲ್ದಾರ್ಗಳಾದ ಪುರಂದರ ಹಾಗೂ ಫಿರೋಜ್ ಷಾ ಅವರಿಗೆ ಉಪವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ಕಂದಾಯ ಇಲಾಖೆ ನೌಕರರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.