ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಗೆ ಭೇಟಿ ನೀಡಿ ಭೀಮಾ ನದಿಯಲ್ಲಿ ಸ್ನಾನ ಪೂಜಾದಿಗಳನ್ನು ಮುಗಿಸಿ ಭೀಮಾ ನದಿ ನೀರು ಸೇವನೆ
ಕನ್ನಡಪ್ರಭ ವಾರ್ತೆ ಅಫಜಲ್ಪುರ
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಫಜಲ್ಪುರ ತಾಲೂಕಿನ ಭೀಮಾ ನದಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಳೆದ 12 ದಿನಗಳಿಂದ ಹೋರಾಟಗಾರ ಶಿವಕುಮಾರ ನಾಟಿಕಾರ ಅವರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು. ತಾಲೂಕಿನ ಭೀಮಾ ನದಿಗೆ ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ ಕುಡಿವ ನೀರಿಗಾಗಿ 1 ಟಿಎಂಸಿ ನೀರು ಹರಿಸಲು ಸರ್ಕಾರ ಸೂಚನೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹ ಕೈ ಬಿಡಲಾಗಿದೆ ಎಂದು ಹೋರಾಟಗಾರ ಶಿವಕುಮಾರ ನಾಟಿಕಾರ ಹೇಳಿದರು. ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಗೆ ಭೇಟಿ ನೀಡಿ ಭೀಮಾ ನದಿಯಲ್ಲಿ ಸ್ನಾನ ಪೂಜಾದಿಗಳನ್ನು ಮುಗಿಸಿ ಭೀಮಾ ನದಿ ನೀರು ಸೇವಿಸಿ ಮಾತನಾಡಿ. ಭೀಮಾ ನದಿಗೆ ನಾರಾಯಣಪುರ ಜಲಾಶಯದಿಂದ 1 ಟಿಎಂಸಿ ನೀರು ಹರಿಸಲು ಆದೇಶ ಹೊರಡಿಸಲಾಗಿದೆ. ಆದರೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪಕ್ಷಾತೀತವಾಗಿ ಹೋರಾಟ ನಡೆಸಿ ಭೀಮಾ ನದಿ ಉಳಿವಿಗಾಗಿ ಹೋರಾಟ ನಡೆಸಲಾಗಿದೆ. ವೈಯಕ್ತಿಕ ಹಿತದೃಷ್ಟಿಯಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿಲ್ಲ.ಎಂದು ಹೇಳಿದರು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.