14 ಗಂಟೆಗೆ ಕೆಲಸದ ಅವಧಿ ಹೆಚ್ಚಳವಾಪಾಸ್‌ಗಾಗಿ ಟೆಕಿಗಳ ಪ್ರತಿಭಟನೆ

KannadaprabhaNewsNetwork |  
Published : Aug 04, 2024, 01:23 AM IST
KITU 7 | Kannada Prabha

ಸಾರಾಂಶ

ಐಟಿ ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗೆ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಐಟಿ ಹಾಗೂ ಐಟಿಇಎಸ್‌ ನೌಕರರ ಸಂಘದ (ಕೆಐಟಿಯು) ನೇತೃತ್ವದಲ್ಲಿ ಐಟಿ ಉದ್ಯೋಗಿಗಳು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಐಟಿ ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗೆ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಐಟಿ ಹಾಗೂ ಐಟಿಇಎಸ್‌ ನೌಕರರ ಸಂಘದ (ಕೆಐಟಿಯು) ನೇತೃತ್ವದಲ್ಲಿ ಐಟಿ ಉದ್ಯೋಗಿಗಳು ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೂರಾರು ಐಟಿ ನೌಕರರು ಭಾಗವಹಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಕೆಐಟಿಯು ಪ್ರಧಾನ ಕಾರ್ಯದರ್ಶಿ ಸುಹಾಸ್ ಅಡಿಗ ಅವರು, ರಾಜ್ಯ ಸರ್ಕಾರ ಕರ್ನಾಟಕ ಶಾಪ್ಸ್‌ ಆ್ಯಂಡ್‌ ಎಶ್ಟಾಬ್ಲಿಷ್‌ಮೆಂಟ್ ಕಾಯಿದೆಗೆ ತಿದ್ದುಪಡಿ ತಂದು ಐಟಿ ಆಧಾರಿತ ಸೇವೆಗಳು ಹಾಗೂ ಬಿಪಿಒಗಳ ಕೆಲಸದ ಅವಧಿ 12ರಿಂದ 14 ತಾಸುಗಳಿಗೆ ಹೆಚ್ಚಿಸುವ ಪ್ರಸ್ತಾವ ಇಟ್ಟುಕೊಂಡಿದೆ. ಈ ನಿಯಮಗಳಿಂದ ಐಟಿ ವಲಯದ ಶೇ.45 ರಷ್ಟು ಉದ್ಯೋಗಿಗಳು ಮಾನಸಿಕ ಒತ್ತಡಕ್ಕೆ ಹಾಗೂ ಶೇ.55ರಷ್ಟು ಉದ್ಯೋಗಿಗಳು ದೈಹಿಕ ಸಮಸ್ಯೆಗೆ ಒಳಗಾಗುತ್ತಾರೆ. ಹದಿನಾಲ್ಕು ಗಂಟೆಗಳ ಕಾಲ ಕೆಲಸ ಮಾಡುವುದು ಅಸಾಧ್ಯ. ಇದು ಅವರ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಅಲ್ಲದೇ, ಉದ್ಯೋಗಿಗಳು ಯಂತ್ರಗಳಂತೆ ಕೆಲಸ ಮಾಡಬೇಕಾಗುತ್ತದೆ. ಹೀಗಾಗಿ, ಸರ್ಕಾರ ಈ ಕೂಡಲೇ ತನ್ನ ನಿರ್ಧಾರ ಕೈ ಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೆಐಟಿಯು ಉಪಾಧ್ಯಕ್ಷೆ ರಶ್ಮಿ ಚೌಧರಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಯಿ ಕಟ್ಟಿ ಜಾತ್ರೆಗೆ ಚಾಲನೆ
ಇಸ್ಲಾಂ ಅಥ೯ ಮಾಡಿಕೊಂಡರೆ ಶ್ರೇಷ್ಠ ಮಾನವ